HEALTH TIPS

ಜಾಗತಿಕ ಇಂಡಿಯಾAI ಶೃಂಗಸಭೆ: ಕೃತಕ ಬುದ್ಧಿಮತ್ತೆಯ ಸವಾಲುಗಳ ಸುತ್ತ ಚರ್ಚೆ

           ವದೆಹಲಿ: ಕೃತಕ ಬುದ್ಧಿಮತ್ತೆಯ ಪ್ರಯೋಜನಗಳು ಮತ್ತು ಸವಾಲಿನ ಕುರಿತ ವಿಚಾರಗಳನ್ನು ಚರ್ಚಿಸಲು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು ಜುಲೈ 3 ಮತ್ತು 4 ರಂದು ಜಾಗತಿಕ ಮಟ್ಟದ ಎಐ ಶೃಂಗಸಭೆಯನ್ನು ಹಮ್ಮಿಕೊಂಡಿದೆ.

            'ಗ್ಲೋಬಲ್ ಇಂಡಿಯಾ ಎಐ ಶೃಂಗಸಭೆ 2024'ರ ಮೂಲಕ, ಭಾರತವು ಎಐ ಆವಿಷ್ಕಾರದಲ್ಲಿ ಜಾಗತಿಕ ನಾಯಕನಾಗಿ ಗುರುತಿಸಿಕೊಳ್ಳಲಿದೆ.

          ಅಲ್ಲದೆ ಎಐ ಎಲ್ಲರಿಗೂ ಪ್ರಯೋಜನಕಾರಿಯಾಗಿದೆ. ರಾಷ್ಟ್ರದ ಸಾಮಾಜಿಕ- ಆರ್ಥಿಕ ಪ್ರಗತಿಗೆ ಎಐ ನೆರವಾಗಲಿದೆ ಎಂದು ಸಚಿವಾಲಯ ತಿಳಿಸಿದೆ.

           ಈ ಕಾರ್ಯಕ್ರಮವು ಎರಡು ದಿನಗಳ ಕಾಲ ನಡೆಯಲಿದ್ದು, ಕೃತಕ ಬುದ್ಧಿಮತ್ತೆಯ ಜವಾಬ್ದಾರಿಯುತ ಅಭಿವೃದ್ಧಿ, ನಿಯೋಜನೆ ಮತ್ತು ಅಳವಡಿಕೆಗಿರುವ ಬದ್ಧತೆಯನ್ನು ಸರ್ಕಾರ ಎತ್ತಿಹಿಡಿಯಲಿದೆ ಎಂದು ಪ್ರಕಟಣೆ ತಿಳಿಸಿದೆ.

             ಈ ಕಾರ್ಯಕ್ರಮದಲ್ಲಿ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವ ಅಶ್ವಿನಿ ವೈಷ್ಣವ್‌, ರಾಜ್ಯ ಖಾತೆ ಸಚಿವ ಜಿತಿನ್‌ ಪ್ರಸಾದ್‌ ಮಾತನಾಡಲಿದ್ದಾರೆ.

              ಈ ಸಭೆಯು ಪ್ರಮುಖ ಅಂತರರಾಷ್ಟ್ರೀಯ ಎಐ ತಜ್ಞರಿಗೆ ವೇದಿಕೆಯನ್ನು ಒದಗಿಸಲಿದೆ. ವಿಜ್ಞಾನ, ಕೈಗಾರಿಕೆ, ಸರ್ಕಾರ, ವಿವಿಧ ಅಂತರರಾಷ್ಟ್ರೀಯ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು ಸೇರಿದಂತೆ ಹಲವು ವಿಭಾಗಗಳ ತಜ್ಞರು ಎಐ ಬಗೆಗಿನ ಮಾಹಿತಿ ಮತ್ತು ಸವಾಲುಗಳ ಬಗ್ಗೆ ಮಾಹಿತಿ ಹಂಚಿಕೊಳ್ಳಲಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries