HEALTH TIPS

ಇವಿಎಂ ಅನ್‌ಲಾಕ್‌ ಮಾಡಬಹುದು: ವರದಿ ಪ್ರಕಟಿಸಿದ ಪತ್ರಿಕೆ, ಹಲವರ ವಿರುದ್ಧ ದೂರು

           ಮುಂಬೈ: ಇವಿಎಂ ಮತಯಂತ್ರಗಳನ್ನು ಅನ್‌ಲಾಕ್‌ ಮಾಡಬಹುದು ಎಂದು ವರದಿ ಪ್ರಕಟಿಸಿದ್ದ ಮಿಡ್‌ ಡೇ ಪತ್ರಿಕೆ ಹಾಗೂ ಈ ಮಾಹಿತಿಯನ್ನು ಪ್ರಚಾರ ಮಾಡಿದ ಪತ್ರಕರ್ತರು ಹಾಗೂ ರಾಜಕಾರಣಿಗಳ ವಿರುದ್ಧ ದೂರು ದಾಖಲಾಗಿದೆ.

           ಮಿಡ್ ಡೇ ಪತ್ರಿಕೆಯ ವರದಿಗಾರ ಶಿರೀಷ್ ವಕಾತಾನಿಯಾ, ಪತ್ರಕರ್ತ ರಾಜದೀಪ್ ಸರ್ದೇಸಾಯಿ, ಶಿವಸೇನಾ ಸಂಸದೆ ಪ್ರಿಯಾಂಕಾ ಚತುರ್ವೇದಿ, ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ಸುಪ್ರಿಯಾ ಶ್ರೀನಾತೆ, ಎನ್​ಸಿಪಿ ಶಾಸಕ ಜಿತೇಂದ್ರ ಅಹ್ವಾದ್, ಯುಟ್ಯೂಬರ್ ಧ್ರುವ್ ರಾಠೀ, ಕಾಂಗ್ರೆಸ್ ನಾಯಕ ಸರಳ್ ಪಟೇಲ್ ಮತ್ತು ಅರ್ಪಿತ್ ಶರ್ಮಾ ಅವರ ವಿರುದ್ಧವೂ ದೂರು ದಾಖಲಿಸಲಾಗಿದೆ.


             ಮಿಡ್ ಡೇ ಪತ್ರಿಕೆ ಹಾಗೂ ಮೇಲಿನ ಆರೋಪಿಗಳ ವಿರುದ್ಧ ಎಫ್​ಐಆರ್ ದಾಖಲಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಅಡ್ವೋಕೇಟ್ ವಿವೇಕಾನಂದ್ ದಯಾನಂದ್ ಗುಪ್ತಾ ಮನವಿ ಅರ್ಜಿ ಸಲ್ಲಿಸಿದ್ದಾರೆ. ಈ ವಿಚಾರವನ್ನು ಅವರು ತಮ್ಮ ಎಕ್ಸ್ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ.

               ಜೂನ್ 16ರಂದು ಮಿಡ್ ಡೇ ಪತ್ರಿಕೆಯಲ್ಲಿ ಇವಿಎಂ ಮತಯಂತ್ರಗಳನ್ನು ಮೊಬೈಲ್‌ ಮೂಲಕ ಅನ್‌ಲಾಕ್‌ ಮಾಡಬಹುದು ಎಂದು ವರದಿ ಪ್ರಕಟಿಸಲಾಗಿತ್ತು. ಈ ವರದಿಯನ್ನು ಬೆಂಬಲಿಸಿ ಹಲವರು ಸಾಮಾಜಿಕ ಮಾಧ್ಯಮಗಳು ಸೇರಿದಂತೆ ಪತ್ರಿಕೆ ಹಾಗೂ ಸುದ್ದಿ ವಾಹಿನಿಗಳಲ್ಲಿ ವರದಿ ಪ್ರಕಟಿಸಿದ್ದರು.

               ಇಲ್ಲಿನ ರಾಜಕಾರಣಿಗಳು ಸಹ ಈ ವರದಿಯನ್ನು ಬೆಂಬಲಿಸಿ ಹೇಳಿಕೆ ನೀಡಿದ್ದರು. ಇದೀಗ ಇವರ ವಿರುದ್ಧ ದೂರ ದಾಖಲಾಗಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries