ಕುಂಬಳೆ: ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪುರಸ್ಕøತ ಕೊಡುಗೈ ದಾನಿ, ಸಮಾಜಸೇವಕ, ಧಾರ್ಮಿಕ ಹರಿಕಾರ ಕೆ.ಕೆ.ಶೆಟ್ಟಿ ಇವರಿಗೆ ಪೌರಸನ್ಮಾನ ನೀಡಿ ಗೌರವಿಸಲಾಯಿತು.
ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಇವರ ಸಹಯೋಗದಲ್ಲಿ ಶನಿವಾರ ಕಾಸರಗೋಡು ಎಚ್.ಎ.ಎಲ್ ಸಮೀಪ ಸೀತಾಂಗೋಳಿ, ಅಲಯನ್ಸ್ ಕನ್ವೆನ್ಷನ್ ಸೆಂಟರ್ನಲ್ಲಿ ಜರಗಿದ ದತ್ತಿನಿ ಪ್ರಶಸ್ತಿ ಪ್ರಧಾನ ಹಾಗೂ ಕನ್ನಡ ಸಂಸ್ಕೃತಿ ಉತ್ಸವದಲ್ಲಿ ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಕೆಯುಡಬ್ಲ್ಯುಜೆ ಕರ್ನಾಟಕ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು, ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್ ಸಹಿತ ಗಣ್ಯರು ಉಪಸ್ಥಿತರಿದ್ದರು.