ಬದಿಯಡ್ಕ: ಶ್ರೀಮದ್ ಎಡನೀರು ಮಠಾಧೀಶ ಶ್ರೀಸಚ್ಚಿದಾನಂದ ಭಾರತೀ ಶ್ರೀಗಳು ಇಂದಿನಿಂದ(ಭಾನುವಾರ) 4ನೇ ವರ್ಷದ ಚಾತುರ್ಮಾಸ್ಯ ವ್ರತಾನುಷ್ಠಾರಾಗುವ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲೆಯ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ದರ್ಶನ ಪಡೆದರು. ಮಧೂರು ಶ್ರೀಸಿದ್ದಿವಿನಾಯಕ ಮಹಾಗಣಪತಿ ದೇವಾಲಯ, ಅಬನಂತಪುರ ಶ್ರೀಅನಂತಪದ್ಮನಾಭ ದೇವಾಲಯ, ಮಲ್ಲ ಶ್ರೀದುರ್ಗಾಪರಮೇಶ್ವರಿ ದೇವಾಲಯ ಮೊದಲಾದ ಸನ್ನಿಧಿಗೆ ಭೇಟಿ ನೀಡಿದರು.
ಕುಂಬಳೆ ಸೀಮೆಯ ಪ್ರಮುಖ ದೇವಾಲಯಗಳಲ್ಲಿ ಒಂದಾದ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿನೀಡಿ ಶ್ರೀದೇವರ ದರ್ಶನ ಪಡೆದರು.
ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ. ರಾಜೇಶ್ ಅವರು ಎಡನೀರುಶ್ರೀಗಳನ್ನು ಸ್ವಾಗತಿಸಿ ದೇವಾಲಯಕ್ಕೆ ಬರಮಾಡಿಕೊಂಡರು. ನಂತರ ಸ್ವಮೀಜಿ ಭಕ್ತಾದಿಗಳಿಗೆ ಮಂತ್ರಾಕ್ಷತೆ ವಿತರಿಸಿದರು.
ಚಾತುರ್ಮಾಸ್ಯಕ್ಕೆ ಇಂದು ಚಾಲನೆ:
ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ನಾಲ್ಕನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆವಿವಿಧ ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಜು. 21ರಂದು ಶ್ರೀ ಮಠದಲ್ಲಿ ಆರಂಭಗೊಳ್ಳಲಿದೆ. ಮಧ್ಯಾಹ್ನ 2.30ಕ್ಕೆ ಖ್ಯಾತ ಉದ್ಯಮಿ ಕೆ.ಕೆ ಶೆಟ್ಟಿ ಸಮಾರಂಭ ಉದ್ಘಾಟಿಸುವರು. ಶಾಸಕ ಸಿ.ಎಚ್. ಕುಞಂಬು ಅಧ್ಯಕ್ಷತೆ ವಹಿಸುವರು. ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮುಖ್ಯ ಅತಿಥಿಯಾಘಿ ಭಾಗವಹಿಸುವರು. ಚಾತುರ್ಮಾಸ್ಯ ಸಮಿತಿ ಗೌರವಾಧ್ಯಕ್ಷ ಟಿ. ಶ್ಯಾಮ ಭಟ್ ಐ.ಎ.ಎಸ್ ಗೌರವ ಉಪಸ್ಥಿತರಿರುವರು.
ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ 4ಕ್ಕೆ ಭಕ್ತಿ ಸಂಗೀತ, 7ರಿಂದ ಬಡಗು ಯಕ್ಷ ವೈಭವದಲ್ಲಿ'ಕಾಳಿದಾಸ ದಾಕ್ಷಾಯಿಣಿ'ಯಕ್ಷಗಾನ ಬಯಲಾಟ ಜರುಗಲಿರುವುದು.