HEALTH TIPS

ಕಾಸರಗೋಡು ಸಹಿತ ಉತ್ತರ ಜಿಲ್ಲೆಗಳಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್

             ತಿರುವನಂತಪುರಂ: ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

             ಇದರ ಭಾಗವಾಗಿ ಇಂದು ಮೂರು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ನಾಳೆ ಬಹುತೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ.

            ಕೇರಳ ಕರಾವಳಿಯಿಂದ ಮಹಾರಾಷ್ಟ್ರ ತೀರದವರೆಗೆ ಕಡಮೆ ಒತ್ತಡದ ಪ್ರದೇಶ ಚಾಲ್ತಿಯಲ್ಲಿದೆ. ಆದ್ದರಿಂದ ಉಬ್ಬರವಿಳಿತ ಮತ್ತು ಸಮುದ್ರ ಪ್ರಕ್ಷುಬ್ದ ವಿದ್ಯಮಾನದ ಸಾಧ್ಯತೆಯಿದೆ. ಗುಜರಾತ್‍ನಲ್ಲಿ ಚಂಡಮಾರುತದ ಪ್ರಭಾವದಿಂದ ಮಳೆ ಮುಂದುವರಿದಿದೆ.

             ಕರಾವಳಿ ನಿವಾಸಿಗಳು ಮತ್ತು ಮೀನುಗಾರರು ಜಾಗರೂಕರಾಗಿರಬೇಕು ಮತ್ತು ಸಮುದ್ರಕ್ಕೆ ಪ್ರವಾಸವನ್ನು ಸಂಪೂರ್ಣವಾಗಿ ನಿಯಂತ್ರಿಸಬೇಕು. ಮುಂದಿನ ಕೆಲವು ದಿನಗಳ ಕಾಲ ಉತ್ತರ ಕೇರಳದಲ್ಲೂ ಮಳೆಯ ಎಚ್ಚರಿಕೆ ನೀಡಲಾಗಿದೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries