HEALTH TIPS

ಕನ್ನಡ ಮಾಧ್ಯಮ ಅಧ್ಯಾಪಕರ ಸಂಘಟನೆಯ ವತಿಯಿಂದ ಕೆ.ಎಸ್.ಆರ್, ಕೆ.ಇ.ಆರ್ ಇಲಾಖೆ ಪರೀಕ್ಷಾ ತರಗತಿ

             ಕುಂಬಳೆ: ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ ಕಾಸರಗೋಡು ಇದರ ಕೇಂದ್ರ ಸಮಿತಿಯ ವತಿಯಿಂದ ಅಧ್ಯಾಪಕರು, ಮುಖ್ಯೋಪಾಧ್ಯಾಯರಾಗಿ ಭಡ್ತಿ ಹೊಂದುವ 2024 ರ ಇಲಾಖೆ ಪರೀಕ್ಷೆ ಕೆ.ಎಸ್.ಆರ್ ಮತ್ತು ಕೆ.ಇ.ಆರ್ ನ  ತರಗತಿಯ ಉಧ್ಘಾಟನೆ ಕುಂಬಳೆ ಹೋಲಿ ಫ್ಯಾಮಿಲಿ ಶಾಲೆಯಲ್ಲಿ ಭಾನುವಾರ ನಡೆಯಿತು.


            ಸತತ ಐದು ವರ್ಷಗಳಿಂದ ಕನ್ನಡ ಮಾಧ್ಯಮ ಅಧ್ಯಾಪಕರಿಗೆ ಇಲಾಖಾ ಪರೀಕ್ಷೆಯ ತರಬೇತಿ ತರಗತಿಗಳನ್ನು ಉಚಿತವಾಗಿ ಕನ್ನಡ ಅಧ್ಯಾಪಕ ಸಂಘಟನೆಯು ನೀಡುತ್ತಾ ಬಂದಿದೆ. 2024 ನೇ ಸಾಲಿನ ಈ ತರಬೇತಿ ತರಗತಿಯನ್ನು ನಿವೃತ್ತ ಜಿಲ್ಲಾ ಶಿಕ್ಷಣ ಉಪನಿರ್ದೇಶಕ ಮಹಾಲಿಂಗೇಶ್ವರ ರಾಜ್ .ಡಿ.ಯಂ ಉದ್ಘಾಟಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ರಾವ್ ಪಿ.ಬಿ ಅಧ್ಯಕ್ಷತೆ ವಹಿಸಿದ್ದರು. ಮಂಜೇಶ್ವರ ಉಪಜಿಲ್ಲಾ ಅಧ್ಯಕ್ಷ ಜಯರಾಮ ಸಿ.ಎಚ್ ಶುಭಾಶಂಸನೆಗೈದರು. ಕುಂಬಳೆ ಉಪಜಿಲ್ಲಾ ಕಾರ್ಯದರ್ಶಿ ನವಪ್ರಸಾದ್, ಮಂಜೇಶ್ವರ ಉಪಜಿಲ್ಲಾ ಘಟಕದ ಶ್ರೀರಾಮ ಕೆದುಕೋಡಿ, ಹೋಲಿ ಫ್ಯಾಮಿಲಿ ಶಾಲಾ ಅಧ್ಯಾಪಕ ಸನತ್ ಕುಮಾರ್  ಉಪಸ್ಥಿತರಿದ್ದರು. ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಬೇಳ ಸ್ವಾಗತಿಸಿದರು. ಕೇಂದ್ರ ಸಮಿತಿ ಸದಸ್ಯ ನವೀನ್ ಕುಮಾರ್ ಪಿ ವಂದಿಸಿದರು. ಕೇಂದ್ರ ಸಮಿತಿ ಕೋಶಾಧಿಕಾರಿ ಶರತ್ ಕುಮಾರ್ ಯಂ ಕಾರ್ಯಕ್ರಮ ನಿರೂಪಿಸಿದರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries