HEALTH TIPS

ಬೆಂಗಳೂರಿನ ಕಾಸರಗೋಡು ವಿಕಾಸ ಟ್ರಸ್ಟ್ ವಾರ್ಷಿಕ ಮಹಾಸಭೆ: ರಕ್ತದಾನ ಶಿಬಿರ ಮತ್ತು ಹೆಲ್ಪ್ ಲೈನ್ ಲೋಕಾರ್ಪಣೆ

                 ಬೆಂಗಳೂರು: ಮಹಾನಗರ ಬೆಂಗಳೂರಲ್ಲಿ ನೆಲೆಸಿರುವ ಕಾಸರಗೋಡು ಜಿಲ್ಲೆಯ ಜನರ ಸಂಘಟನೆ ವಿಕಾಸ ಟ್ರಸ್ಟ್ ವಾರ್ಷಿಕ ಮಹಾಸಭೆಯು ರಾಷ್ಟ್ರೋತ್ಥಾನ ರಕ್ತ ಕೇಂದ್ರದಲ್ಲಿ ಶನಿವಾರ ನಡೆಯಿತು. ಈ ಸಂದರ್ಭದಲ್ಲಿ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ, ವಿಕಾಸ ಟ್ರಸ್ಟ್ ಹೆಲ್ಪ್ ಲೈನ್ ನಂಬರ್ ೯೭ ೪೩ ೧೧ ೭೭ ೩೩ ಲೋಕಾರ್ಪಣೆಗೊಳಿಸಿ ಮಾತನಾಡಿದ ಖ್ಯಾತ ನಟಿ ರೂಪಿಕಾ ಅವರು ರಕ್ತದಾನದ ಮಹತ್ವವನ್ನು ತಿಳಿಸಿ, ವಿಕಾಸ ಟ್ರಸ್ಟ್ ನಡೆಸುತ್ತಿರುವ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದರು.

               ರಾಷ್ಟ್ರೋತ್ಥಾನ ರಕ್ತಕೇಂದ್ರದ ಯೋಜನೆಯಾದ ‘ಸಂರಕ್ಷ’- ತಲಸ್ಸೆಮಿಯಾ ಡೇ ಕೇರ್ ಸೆಂಟರ್ ಯೋಜನೆಯ ಫಲಾನುಭವಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು. ವಿಕಾಸ ಟ್ರಸ್ಟ್ ಅಧ್ಯಕ್ಷ  ರವಿನಾರಾಯಣ ಗುಣಾಜೆ ಅವರು ಮುಂದಿನ ಕಾರ್ಯಯೋಜನೆ ಕುರಿತು ವಿವರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಟ್ರಸ್ಟಿ ಡಾ. ವಿಠಲ್ ಪ್ರಸಾದ್ ಹಾಗೂ ನೂರಾರು ಸದಸ್ಯರು ಉಪಸ್ಥಿತರಿದ್ದರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries