HEALTH TIPS

ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್, ಇತರರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ ಸಿಬಿಐ

        ವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಇತರ ಆರೋಪಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ರೋಸ್‌ ಅವೆನ್ಯೂ ಕೋರ್ಟ್‌ಗೆ ಸೋಮವಾರ (ಇಂದು) ಆರೋಪಪಟ್ಟಿ ಸಲ್ಲಿಸಿದೆ.

           ಈ ಪ್ರಕರಣವು ದೆಹಲಿ ಸರ್ಕಾರ ಸದ್ಯ ಹಿಂಪಡೆದಿರುವ ಅಬಕಾರಿ ನೀತಿ ಜಾರಿ ವೇಳೆ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದ್ದಾಗಿದೆ.

          ಇದೇ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್‌ ಜಾಮೀನು ನೀಡಿದೆ.


              ಹಣ ಅಕ್ರಮ ವರ್ಗಾವಣೆ ಮತ್ತು ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಉಪ ಮುಖ್ಯಮಂತ್ರಿ ಹಾಗೂ ಎಎಪಿ ಶಾಸಕ ಮನೀಶ್‌ ಸಿಸೋಡಿಯಾ ಅವರು ಸಲ್ಲಿಸಿರುವ ಜಾಮೀನು ಅರ್ಜಿಗಳ ವಿಚಾರಣೆಯು ಸುಪ್ರೀಂ ಕೋರ್ಟ್‌ನಲ್ಲಿ ಇಂದು ನಡೆಯಲಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries