ಕಾಸರಗೋಡು: ಸಾಮಾಜಿಕ ಜಾಲತಾಣಗಳ ಮೂಲಕ ಮಹಿಳೆಯರ ಮಾನಹಾನಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಂತಹ ದೂರುಗಳ ಬಗ್ಗೆ ಕಠಿಣ ನಿಲುವು ತೆಗೆದುಕೊಳ್ಳಲಾಗುವುದು ಎಂದು ಕೇರಳ ಮಹಿಳಾ ಆಯೋಗದ ಸದಸ್ಯೆ, ವಕೀಲೆ ಪಿ. ಕುಞËಯಿಷಾ ತಿಳಿಸಿದ್ದಾರೆ. ಅವರು ಕಾಸರಗೋಡು ಜಿಲ್ಲಾಧಿಕಾರಿ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅದಾಲತ್ ಬಳಿಕ ಸುದ್ದಿಗೋಷ್ಠೀಯಲ್ಲಿ ಮಾತನಾಡಿದರು.
ಚುನಾಯಿತ ಮಹಿಳಾ ಪ್ರತಿನಿಧಿಗಳು ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಅವಮಾನಿಸುವ ದೂರುಗಳು ಮಹಿಳಾ ಆಯೋಗದ ಮುಂದೆ ಹೆಚ್ಚಾಗಿ ಬರುತ್ತಿವೆ. ಕಾಸರಗೋಡು ಜಿಲ್ಲೆಯಲ್ಲಿ ನಡೆದ ಅದಾಲತ್ನಲ್ಲಿ ಇಂತಹ ಎರಡು ದೂರುಗಳು ದೂರುಗಳು ಲಭಿಸಿದೆ. ಕೌಟುಂಬಿಕ ಹಿಂಸಾಚಾರ ಕಾಯ್ದೆ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಜಾಗೃತಿ ತರಗತಿಗಳನ್ನು ಶಾಲೆಗಳಲ್ಲಿ ನಡೆಸಲಾಗುತ್ತದೆ. ಸಾಮಾಜಿಕ ಮಾಧ್ಯಮದ ಮೂಲಕ ನಡೆಸುವ ಮಾನಹಾನಿಕರ ಪ್ರಚಾರಗಳನ್ನು ಕಾನೂನುಪ್ರಕಾರ ನಿಭಾಯಿಸುವ ಬಗ್ಗೆ ಮಹಿಳೆಯರಿಗೆ ಜಾಗೃತಿ ಕಾರ್ಯಕ್ರಮ ನೀಡಲಾಗುತ್ತದೆ. ಮಹಿಳಾ ಆಯೋಗವು ಶಾಲಾ ಕಾಲೇಜು ವಿದ್ಯಾರ್ಥಿಗಳಿಗಾಗಿ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಈಗಾಗಲೇ ಹಮ್ಮಿಕೊಂಡಿದ್ದು, ಇದನ್ನು ಮುಂದುವರಿಸಲಾಗುವುದು ಎಂದು ತಿಳಿಸಿದರು. ಅದಾಲತ್ನಲ್ಲಿ ನಾಲ್ಕು ದೂರುಗಳಿಗೆ ಪರಿಹಾರ ಕಲ್ಪಿಸಲಾಗಿದ್ದು, ನಾಲ್ಕು ದೂರುಗಳ ಕುರಿತು ಪೆÇಲೀಸರಲ್ಲಿ ಹೆಚ್ಚಿನ ವರದಿ ಕೇಳಲಾಗಿದೆ. 22 ದೂರುಗಳನ್ನು ಮುಂದಿನ ಅದಾಲತ್ನಲ್ಲಿ ಪರಿಗಣಿಸಲು ತೀರ್ಮಾನಿಸಲಾಯಿತು. ಒಟ್ಟು 30 ದೂರುಗಳು ಲಭಿಸಿತ್ತು. ಮಹಿಳಾ ಠಾಣೆ ಎಎಸ್ಐ ಟಿ. ಶೈಲಜಾ, ಸಿಪಿಒ ಎ.ಕೆ. ಜಯಶ್ರೀ, ಅಡ್ವ. ಎಂ. ಇಂದಿರಾವತಿ, ಕುಟುಂಬ ಸಲಹೆಗಾರ್ತಿ ರಮ್ಯಾ ಉಪಸ್ಥೀತರಿದ್ದರು.