HEALTH TIPS

ಇಂದಿನಿಂದ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಸಾಂಸ್ಕøತಿಕ ಉತ್ಸವ- ಸಿರಿಬಾಗಿಲು ಯಕ್ಷ ವೈಭವ

               ಕಾಸರಗೋಡು: ಹವ್ಯಾಸಿ ಕಲಾತಂಡಗಳ ಚಾರಿತ್ರಿಕ ಯಕ್ಷಗಾನ ಪ್ರದರ್ಶನ, ವಿಚಾರ ಸಂಕಿರಣ, ಭರತನಾಟ್ಯ, ಕನ್ನಡ ನಾಡಗೀತೆ, ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಜುಲೈ 17ರಿಂದ 20ರ ವರೆಗೆ ಜರುಗಲಿದೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಸಹಯೋಗದೊಂದಿಗೆ 'ಕರ್ನಾಟಕ ಸಂಭ್ರಮ - 50 ಸವಿ ನೆನಪು -2023-24' ಮತ್ತು ಕಲಾಪೆÇೀಷಕರ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಲಿರುವುದು.

            17ರಂದು ಬೆಳಗ್ಗೆ 9.30ಕ್ಕೆ ಪರಮಪೂಜ್ಯ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರು ಸಮಾರಂಭ ಉದ್ಘಾಟಿಸಿ ಆಶೀರ್ವಚನ ನೀಡುವರು.   ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅಧ್ಯಕ್ಷತೆ ವಹಿಸುವರು. ಯಕ್ಷಗಾನ ಕಲಾಪೆÇೀಷಕರು,  ಸಂಘಟಕರು ಆಗಿರುವ ಹೈದರಾಬಾದಿನ ಹೋಟೆಲ್ ಉದ್ಯಮಿ  ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತೀಹಳ್ಳಿ, ಮಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ  ಶ್ರೀ ರಾಜೇಶ್,  ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎಂ. ಆರ್. ಸುಬ್ಬಯ್ಯಕಟ್ಟೆ, ಯಕ್ಷಗಾನ ಅಕಾಡೆಮಿ ಸದಸ್ಯ ಶ್ರೀ ಸತೀಶ ಅಡಪ ಸಂಕಬೈಲು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ನಾಲ್ಕು ದಿವಸಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ಐದು ಜಿಲ್ಲೆಗಳಿಂದ ತೆಂಕುತಿಟ್ಟು ಹಾಗೂ ಬಡಗುತಿಟ್ಟಿನ  26 ಹವ್ಯಾಸಿ ಯಕ್ಷಗಾನ ತಂಡಗಳು  ಪಾಲ್ಗೊಳ್ಳಲಿವೆ. ಸ್ಥಳೀಯ ಯುವ ಪ್ರತಿಭೆಗಳ ಭರತನಾಟ್ಯ, ಕನ್ನಡ ಭಾವಗೀತೆಗಳ ಗಾಯನ  ನಡೆಯಲಿದೆ. 

               20ರಂದು ಮಧ್ಯಾಹ್ನ 2 ಗಂಟೆಯಿಂದ ಸಿರಿಬಾಗಿಲು ಪ್ರತಿಷ್ಠಾನ ಪ್ರಕಾಶಿಸಿದ 7 ಗ್ರಂಥಗಳ ಕುರಿತಾದ ವಿಚಾರ ಸಂಕಿರಣ ನಡೆಯಲಿದೆ. ಶ್ರೀಧರ ಡಿ. ಎಸ್, ರಾಧಾಕೃಷ್ಣ ಉಳಿಯತ್ತಡ್ಕ, ರಾಧಾಕೃಷ್ಣ ಕಲ್ಚರ್, ಲಕ್ಷ್ಮಿ ಮಚ್ಚಿನ, ಡಾ. ನಾಗವೇಣಿ ಮಂಚಿ, ಕುಮಾರ ಸುಬ್ರಮಣ್ಯ ಮುಳಿಯಾಲ ಮತ್ತು ರಾಘವೇಂದ್ರ ಉಡುಪ ನೇರಳೆಕಟ್ಟೆ ಪುಸ್ತಕಗಳ ಬಗ್ಗೆ ವಿಮರ್ಶೆ ನಡೆಸುವರು.  ಸಂಜೆ ನಡೆಯುವ ಸಮಾರೋಪ  ಸಮಾರಂಭದಲ್ಲಿ ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರು,  ಉಪ್ಪಳ ಕೊಂಡೆವೂರು ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ  ಆಶೀರ್ವಚನ ನೀಡುವರು.  ಮೂಡುಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಅಧ್ಯಕ್ಷರಾದ ಡಾ.ಎಂ.ಮೋಹನ್ ಆಳ್ವ ಅಧ್ಯಕ್ಷತೆ ವಹಿಸುವರು.   



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries