HEALTH TIPS

ಯಕ್ಷಗಾನ ನಾಟ್ಯ, ಹಿಮ್ಮೇಳ ತರಬೇತಿ ತರಗತಿ ಉದ್ಘಾಟನೆ

               ಕಾಸರಗೋಡು: ನಗರದ ಪೇಟೆ ಶ್ರೀ ವೆಂಕಟ್ರಮಣ ದೇವಸ್ಥಾನದ ವ್ಯಾಸ ಮಂಟಪದಲ್ಲಿ ಈ ವರ್ಷದ ನಾಟ್ಯ ತರಬೇತಿ ತರಗತಿ ಮತ್ತು ಹೊಸದಾಗಿ ಯಕ್ಷಗಾನ ಹಿಮ್ಮೇಳ ತರಗತಿಗೆ ಚಲನೆ ನೀಡಲಾಯಿತು. ಯಕ್ಷರಂಗದ ಖ್ಯಾತ ಕಲಾವಿದ ರಾಧಾಕೃಷ್ಣ ನಾವಡ ಮಧೂರು ದೀಪ ಬೆಳಗಿಸಿ ತರಬೇತಿ ತರಗತಿ ಉದ್ಘಾಟಿಸಿದರು. 

              ಎಳವೆಯಿಂದ ಯಕ್ಷಗಾನದ ಕಲಿಕೆ ಮಕ್ಕಳಲ್ಲಿ ಬೌದ್ಧಿಕ ಯಕ್ಷಗಾನದ ಮಹತ್ವದ ಕುರಿತು ವಿಸ್ತಾರವಾಗಿ ನುಡಿದರು ಅಧ್ಯಕ್ಷರಾಗಿ ತರಬೇತಿ ಕೇಂದ್ರದ ಅಧ್ಯಕ್ಷರಾದ ಶ್ರೀ ಕೆ.ಎನ್. ರಾಮಕೃಷ್ಣ ಹೊಳ್ಳ ಅಧ್ಯಕ್ಷತೆ ವಹಿಸಿದರು. ಹಿಮ್ಮೇಳ ಗುರುಗಳಾದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಶ್ರೀ ರಾಘವ ಬಲ್ಲಾಳ್ ಕಾರಡ್ಕ, ನಾಟ್ಯ ಗುರುಗಳಾದ ಶ್ರೀ ರಾಕೇಶ್ ರೈ ಅಡ್ಕ, ಶ್ರೀ ವೆಂಕಟ್ರಮಣಸ್ವಾಮಿ ಕೃಪಾಶ್ರಿತ ಕಲಾ ಸಂಘದ ಅಧ್ಯಕ್ಷರಾದ ಶ್ರೀ ಕೆ.ಎನ್. ವೆಂಕಟ್ರಮಣ ಹೊಳ್ಳ ಉಪಸ್ಥಿತರಿದ್ದರು. ನಾಟ್ಯತರಬೇತಿ ಉಚಿತವಾಗಿಯೂ ನೀಡುತ್ತಿದ್ದು ಹಿಮ್ಮೇಳ ತರಗತಿಗೆ ಸಣ್ಣ ಶುಲ್ಕವನ್ನಿರಿಸಿ ತರಬೇತಿ ನೀಡಲಾಗುವುದು. ಕಾರ್ಯಕ್ರಮದಲ್ಲಿ ರಾಮಕೃಷ್ಣ ಹೊಳ್ಳ ಇವರು ಸ್ವಾಗತಿಸಿ ಕಿಶೋರ್ ಕುಮಾರ್ ವಂದಿಸಿದರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries