ಪೆರ್ಲ: ಡಾ.ಶ್ಯಾಮಪ್ರಸಾದ್ ಮುಖರ್ಜಿ ಸಂಸ್ಮರಣಾ ಕಾರ್ಯಕ್ರಮದ ಅಂಗವಾಗಿ ಎಸ್.ಸಿ ಮೋರ್ಚಾ ನೇತೃತ್ವದಲ್ಲಿ ಎಣ್ಮಕಜೆ ಪಂಚಾಯಿತಿಯ ವಿಕಲಚೇತನ ಮಕ್ಕಳ ಸಾಂತ್ವನಂ ಬಡ್ಸ್ ಶಾಲೆಯಲ್ಲಿ ಸಿಹಿಯೂಟ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಎಸ್.ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎ.ಕೆ.ಕಯ್ಯಾರ್ ಸಮಾರಂಭ ಉದ್ಘಾಟಿಸಿದರು. ಜಿಲ್ಲಾ ಸಮಿತಿ ಸದಸ್ಯ ಹರೀಶ್ಚಂದ್ರ, ಬಿಜೆಪಿ ಕುಂಬಳೆ ಮಂಡಲ ಅಧ್ಯಕ್ಷ ಸುನೀಲ್ ಅನಂತಪುರ, ಮಂಡಲ ಪ್ರಧಾನ ಕಾರ್ಯದರ್ಶಿ ಕೆ.ಪಿ.ಅನಿಲ್ ಕುಮಾರ್, ಮಂಡಲ ಉಪಾಧ್ಯಕ್ಷ ನಾರಾಯಣ ನಾಯ್ಕ, ಮಂಡಲ ಕಾರ್ಯದರ್ಶಿ ಸ್ವಾಗತ್ ಸೀತಾಂಗೊಳಿ, ಬಿಜೆಪಿ ಎಣ್ಮಕಜೆ ಪಂಚಾಯಿತಿ ಸಮಿತಿ ಅಧ್ಯಕ್ಷ ಸುಮಿತ್ ರಾಜ್, ಮಹಿಳಾ ಮೋರ್ಚಾ ಮಂಡಲ ಸಮಿತಿ ಅಧ್ಯಕ್ಷೆ, ಗ್ರಾಪಂ ಉಷಾ ಗಣೇಶ್, ಪಂಚಾಯತ್ ಸದಸ್ಯರಾದ ಆಶಾಲತಾ ಮತ್ತು ಇಂದಿರಾ ಉಪಸ್ಥಿತರಿದ್ದರು.