HEALTH TIPS

ಕಿದೂರಲ್ಲಿ ಕೆಸರ್ ಕಂಡೊಡು ಕುಸಲ್ದ ಗೊಬ್ಬುಲು ಕಾರ್ಯಕ್ರಮ: ನವಜೀವನ ಸಮಿತಿ ಆಯೋಜನೆಯ ಕಾರ್ಯಕ್ರಮ ರಾಜ್ಯಕ್ಕೆ ಮಾದರಿ: ವಿವೇಕ್ ವಿನ್ಸಟ್ ಪಾಯಸ್

                 ಕುಂಬಳೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ-ಬಿ.ಸಿ. ಟ್ರಸ್ಟ್, ಮಂಜೇಶ್ವರ ತಾಲ್ಲೂಕು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಬೆಳ್ತಂಗಡಿ, ಕಿದೂರು ಶ್ರೀ ಮಹಾದೇವ ನವಜೀವನ ಸಮಿತಿ ಕಳತ್ತೂರು ಇವರ  ಸಂಯುಕ್ತ ಆಶ್ರಯದಲ್ಲಿ ಡಾ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರ  ಶುಭ ಆಶೀರ್ವಾದೊಂದಿಗೆ ಕೆಸರ್ ಕಂಡೊಡು ಕುಸಲ್ದ ಗೊಬ್ಬುಲು ಕಾರ್ಯಕ್ರಮ ಕಿದೂರು ಬಯಲಲ್ಲಿ ನಡೆಯಿತು.

           ಅಖಿಲ ಕರ್ನಾಟಕ ರಾಜ್ಯ ಜನಜಾಗೃತಿ ವೇದಿಕೆ ಕಾರ್ಯದರ್ಶಿ ಹಾಗೂ ಜನಜಾಗೃತಿ  ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸಟ್ ಪಾಯಸ್ ದೀಪ ಬೆಳಗಿಸಿ ಉದ್ಘಾಟಿಸಿದರು. ನವಜೀವನ  ಸಮಿತಿ ಸದಸ್ಯರು ಆಯೋಜಿಸಿರುವ ಈ ಕಾರ್ಯಕ್ರಮ ರಾಜ್ಯಕ್ಕೆ ಮಾದರಿ ಎಂದು ಅವರು ಪ್ರಶಂಸೆ ವ್ಯಕ್ತಪಡಿಸಿದರು. 

              ಸಭೆಯ  ಅಧ್ಯಕ್ಷತೆಯನ್ನು ಮಂಜೇಶ್ವರ  ತಾಲ್ಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ವಹಿಸಿದ್ದರು. ದುಶ್ಚಟದಿಂದ  ಮುಕ್ತಿ ಹೊಂದಿರುವ ಎಲ್ಲರೂ ಸಮಾಜಕ್ಕೆ ಒಳಿತು ಮಾಡುವ ಸಂಕಲ್ಪ ಮಾಡಬೇಕೆಂದು ಕರೆನೀಡಿದರು.


              . ಯೋಜನೆಯ  ಜಿಲ್ಲಾ ನಿರ್ದೇಶಕ  ಪ್ರವೀಣ್ ಕುಮಾರ್ ಕ್ರೀಡಾಕೂಟವನ್ನು ಮುಟ್ಟಾಲೆ ತೋಡಿಸಿ ಉದ್ಘಾಟಿಸಿ ನವಜೀವನ  ಸಮಿತಿ ಸದಸ್ಯರ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತ  ಪಡಿಸಿದರು. ತುಳುಸಾಹಿತ್ಯ ಪರಿಷತ್ ಸದಸ್ಯ  ಶ್ರೀನಿವಾಸ್ ಆಳ್ವ ಕಳತ್ತೂರು ಅವರು ತುಳು ಜನರ  ಬದುಕು ಹಿರಿಯರು ಕಳಿಸಿಕೊಟ್ಟ ಸಂಸ್ಕಾರ ಸಂಸ್ಕøತಿ ಬಗ್ಗೆ ಮಾತಾಡಿದರು. ಕಾಸರಗೋಡು ತಾಲ್ಲೂಕು ಜನಜಾಗೃತಿ  ವೇದಿಕೆ ಅಧ್ಯಕ್ಷ ಅಖಿಲೇಶ್ ನಗುಮುಗಂ, ಕುಂಬಳೆ ಗ್ರಾಮ ಪಂಚಾಯತಿ ಸದಸ್ಯೆ ಪುಷ್ಪಲತಾ ಹಾಗೂ ರವಿರಾಜ್ ಶುಭ ಹಾರೈಸಿದರು. ನಿಕಟಪೂರ್ವ ಸದಸ್ಯ ಸುಕೇಶ್ ಭಂಡಾರಿ ಉಪಸ್ಥಿತರಿದ್ದರು. ತಾಲ್ಲೂಕು ಯೋಜನಾಧಿಕಾರಿ ಶಶಿಕಲಾ ಸುವರ್ಣ ಸ್ವಾಗತಿಸಿ, ಜನಜಾಗೃತಿ ವೇದಿಕೆ ಕಾಸರಗೋಡು ಜಿಲ್ಲಾ ನಿಕಟ ಪೂರ್ವ ಅಧ್ಯಕ್ಷ ಅಶ್ವಥ್ ಪೂಜಾರಿ ಲಾಲ್ ಬಾಗ್ ವಂದಿಸಿದರು. ದೇವಿಪ್ರಸಾದ್ ಶೆಟ್ಟಿ ಬೆಜ್ಜ ಕಾರ್ಯಕ್ರಮ ನಿರೂಪಿಸಿದರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries