HEALTH TIPS

ಕನ್ನಡ ಹೋರಾಟಕ್ಕೆ ಶಕ್ತಿ ತುಂಬುವಲ್ಲಿ ಕಾಸರಗೋಡಿನ ಪತ್ರಿಕೆಗಳ ಮಹತ್ವದ ಪಾತ್ರ : ರಾಧಾಕೃಷ್ಣ ಕೆ.ಉಳಿಯತ್ತಡ್ಕ: ಕೋಣೆಕಣಿಯಲ್ಲಿ ಕನ್ನಡ ಪತ್ರಿಕಾ ದಿನಾಚರಣೆ

                     ಕಾಸರಗೋಡು: ಕನ್ನಡ ಹೋರಾಟಕ್ಕೆ ಶಕ್ತಿ ತುಂಬುವಲ್ಲಿ ಕಾಸರಗೋಡಿನ ಪತ್ರಿಕೆಗಳ ಕೊಡುಗೆ ಗಣನೀಯವಾದುದು. ಕನ್ನಡದ ಅಸ್ತಿತ್ವವನ್ನು ಭದ್ರಪಡಿಸಲು ಕನ್ನಡ ಪತ್ರಕರ್ತರು ಪ್ರಾಮಾಣಿಕ ಪ್ರಯತ್ನ ನಡೆಸಿದ್ದಾರೆಂದು ಕವಿ, ಹಿರಿಯ ಪತ್ರಕರ್ತ ರಾಧಾಕೃಷ್ಣ ಕೆ.ಉಳಿಯತ್ತಡ್ಕ ಹೇಳಿದರು. 

               ಕನ್ನಡ ಪತ್ರಿಕಾ ದಿನಾಚರಣೆಯಂಗವಾಗಿ ಕೋಟೆಕಣಿ ಶ್ರೀ ರಾಮನಾಥ ಸಾಂಸ್ಕøತಿಕ ಭವನ ಸಮಿತಿ ಆಶ್ರಯದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. 


          ಭಾಷಾವಾರು ಪ್ರಾಂತ್ಯ ರಚನೆಯಾದಾಗ ಅಚ್ಚಗನ್ನಡ ಪ್ರದೇಶ ಕಾಸರಗೋಡು ಅನ್ಯಾಯವಾಗಿ ಕೇರಳಕ್ಕೆ ಸೇರಿಸಲ್ಪಟ್ಟಿತು. ಅಂದಿನಿಂದಲೇ ಇಲ್ಲಿ ಕನ್ನಡಿಗರ ಹೋರಾಟ ಪ್ರಾರಂಭಿಸಲಾಯಿತು. ಕನ್ನಡ ಪತ್ರಕರ್ತರು ಮಾತ್ರವಲ್ಲದೆ ಪತ್ರಿಕೆಗಳ ಮಾಲಕರೂ ಆ ಹೋರಾಟದಲ್ಲಿ ಸಕ್ರಿಯರಾದರು. ವರದಿ, ಲೇಖನಗಳ ಮೂಲಕ ಜಾಗೃತಿ ಮೂಡಿಸಿ ಸರ್ವ ಕನ್ನಡಿಗರನ್ನು ಬಡೆದೆಬ್ಬಿಸಿದರು. ಕಾಸರಗೋಡು ಸಮಾಚಾರ, ನಾಡ ಪ್ರೇಮಿ, ಕಾಸರಗೋಡು ಕನ್ನಡ ಕಹಳೆ ಸಹಿತ ಹಲವು ಪತ್ರಿಕೆಗಳು ಕನ್ನಡಿಗರ ಹೋರಾಟಕ್ಕೆ ಸೂರ್ತಿ ನೀಡಿದುವು. ಈಗಲೂ ಪತ್ರಿಕೆಗಳು ಕನ್ನಡದ ಅವಗಣನೆಯ ವಿರುದ್ಧ ಧ್ವನಿಯೆತ್ತುತ್ತಲೇ ಇವೆ ಎಂದು ರಾಧಾಕೃಷ್ಣ ಕೆ.ಉಳಿಯತ್ತಡ್ಕ ಹೇಳಿದರು. 

             ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಪತ್ರಿಕೆಗಳನ್ನು ಪ್ರದರ್ಶಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಸರಗೋಡಿನಲ್ಲಿ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕøತಿಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಎ.ಆರ್.ಸುಬ್ಬಯ್ಯಕಟ್ಟೆ ಅವರು ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದರು. 


               ಲೇಖಕ ವಿಷ್ಣು ಶ್ಯಾನುಬೋಗ್ ಅವರು ಕನ್ನಡ ಪತ್ರಿಕೆಗಳ ಉದಯ ಮತ್ತು ವಿಕಾಸದ ಬಗ್ಗೆ ಮಾತನಾಡಿ, ಪತ್ರಿಕೆಗಳನ್ನು ಓದುವ ಹವ್ಯಾಸವನ್ನು  ರೂಢಿಸಿಕೊಳ್ಳಬೇಕೆಂದು ಯುವಜನ, ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕೆ.ಸಿ.ಎನ್. ಚಾನೆಲ್ ನಿರ್ದೇಶಕ ಪುರುಷೋತ್ತಮ ನಾೈಕ್ ಶುಭಹಾರೈಸಿದರು. ಇದೇ ಸಂದರ್ಭದಲ್ಲಿ ಪತ್ರಕರ್ತ, ಲೇಖಕ, ಸಂಘಟಕ ರವಿ ನಾಯ್ಕಾಪು ಅವರನ್ನು ಗೌರವಿಸಲಾಯಿತು. ಕಾವ್ಯಾ ಕುಶಲ ಗೌರವ ಪತ್ರವನ್ನು ವಾಚಿಸಿದರು. ಹರಿದಾಸ್ ಜಯಾನಂದ ಕುಮಾರ್ ಹೊಸದುರ್ಗ ಪ್ರಾರ್ಥನೆ ಹಾಡಿದರು. ಶ್ರೀ ರಾಮನಾಥ ಸಾಂಸ್ಕøತಿಕ ಭವನ ಸಮಿತಿಯ ಪ್ರಧಾನ ಸಂಚಾಲಕ ಗುರುಪ್ರಸಾದ್ ಕೋಟೆಕಣಿ ಪ್ರಾಸ್ತಾವಿಕ ನುಡಿಗಳನ್ನಾಡಿ, ಸ್ವಾಗತಿಸಿದರು. ಸಂಘಟಕ ಜಗದೀಶ್ ಕೂಡ್ಲು ಕಾರ್ಯಕ್ರಮ ನಿರೂಪಿಸಿದರು. ಕಾವ್ಯ ಕುಶಲ ವಂದಿಸಿದರು. 



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries