ಬದಿಯಡ್ಕ: ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪುರಸ್ಕøತ, ಕೊಡುಗೈ ದಾನಿ, ಮುಂಡಪಳ್ಳ ಶ್ರೀ ರಾಜರಾಜೇಶ್ವರಿ ಕ್ಷೇತ್ರದ ನವನಿರ್ಮಾತೃ ಹಾಗೂ ಮೊಕ್ತೇಸರ ಕೆ.ಕೆ. ಶೆಟ್ಟಿ ಕುತ್ತಿಕಾರು ಅವರು ಭಾನುವಾರ ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಕ್ಷೇತ್ರದ ಜೀರ್ಣೋದ್ಧಾರದ ಪ್ರಗತಿ ಪರಿಶೀಲನೆ ನಡೆಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ವೆಂಕಟರಮಣ ಭಟ್ ಚಂಬಲ್ತಿಮಾರ್, ಜೀರ್ಣೋದ್ಧಾರಸಮಿತಿ ಪ್ರಧಾನ ಕಾರ್ಯದರ್ಶಿ, ಮೊಕ್ತೇಸರ ಪಿ.ಜಿ. ಜಗನ್ನಾಥ ರೈ, ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ನಿರಂಜನ ರೈ ಪರಡಾಲ, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷರಾದ ಪಿ.ಜಿ. ಚಂದ್ರಹಾಸ ರೈ,ಪ್ರೊ.ಎ. ಶ್ರೀನಾಥ್ ಕಾಸರಗೋಡು, ಟ್ರಸ್ಟಿಗಳಾದ ಸೀತಾರಾಮ ನವಕಾನ, ಜೀರ್ಣೋದ್ಧಾರ ಸಮಿತಿ ಲೆಕ್ಕಪರಿಶೋಧಕ ಸತೀಶ್ ಭಟ್ ಪುದ್ಯೋಡು, ನಟರಾಜ ಮಾಸ್ತರ್, ಜಗದೀಶ ಪೆರಡಾಲ, ಯುವ ಸಮಿತಿ ಪ್ರ.ಕಾರ್ಯದರ್ಶಿ ಭಾಸ್ಕರ ಪಂಜಿತ್ತಡ್ಕ, ಅರ್ಚಕ ವೃಂದ, ಸಿಬ್ಬಂದಿ ವರ್ಗ, ಜೀರ್ಣೋದ್ಧಾರ ಸಮಿತಿ ಸದಸ್ಯರು, ಶ್ರೀಶಿವಶಕ್ತಿ ಪೆರಡಾಲ ಇದರ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭ ಕೆ.ಕೆ.ಶೆಟ್ಟಿ ಅವರನ್ನು ಗೌರವಿಸಲಾಯಿತು.