ಬದಿಯಡ್ಕ: ಕಾಸರಗೋಡು ಜಿಲ್ಲಾ ಮೊಗೇರ ಸಂಘದ ವತಿಯಿಂದ 2023-24 ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲಿ ಎ ಪ್ಲಸ್ ಪಡೆದು, ಜಿಲ್ಲೆಯಲ್ಲಿ ಉತ್ತೀರ್ಣರಾಗಿರುವ ಸಮುದಾಯದ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಬಿಳಿ ಹಾಳೆಯಲ್ಲಿ ಸ್ವತಃತಯಾರಿಸಿದ ಅರ್ಜಿಯೊಂದಿಗೆ ಅಂಕಪಟ್ಟಿ ಪ್ರತಿ, ಆಧಾÁರ್ ಪ್ರತಿ, ರೇಷನ್ ಕಾರ್ಡ್ ಪ್ರತಿ ಹಾಗೂ ವಿದ್ಯಾರ್ಥಿಗಳ 1 ಭಾವಚಿತ್ರ ಸಹಿತ ಜುಲೈ 12 ರ ಸಂಜೆ 4 ಗಂಟೆಗೆ ಮುಂಚಿತವಾಗಿ ತಲುಪುವಂತೆ ಅಧ್ಯಕ್ಷರು, ಕಾಸರಗೋಡು ಜಿಲ್ಲಾ ಮೊಗೇರ ಸಂಘ ಹೊಸಂಗಡಿ ಮಂಜೇಶ್ವರ, ಕಛೇರಿ: ಬದಿಯಡ್ಕ, ಅಂಚೆ: ಪೆರಡಾಲ - 671 551 ಎಂಬ ವಿಳಾಸಕ್ಕೆ ಕಳುಹಿಸಲು ಕೋರಲಾಗಿದೆ. ಹೆಚ್ಚಿನ ವಿವರಗಳಿಗೆ 7907776876, 9746562213 ಸಂಖ್ಯೆಯನ್ನು ಸಂಪರ್ಕಿಸಬಹುದು.