HEALTH TIPS

ಉತ್ತರ ಪ್ರದೇಶ | ಎಸ್‌ಪಿ ಮುಖಂಡನ ನಿವಾಸದ ಮೇಲೆ ಗುಂಡಿನ ದಾಳಿ

Top Post Ad

Click to join Samarasasudhi Official Whatsapp Group

Qries

          ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸಮಾಜವಾದಿ ಪಕ್ಷದ ಮುಖಂಡನ ನಿವಾಸದ ಮೇಲೆ ಗುಂಡಿನ ದಾಳಿ ನಡೆದಿದ್ದು, ಬಾಲಕ ಸೇರಿ ಆರು ಜನರಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

            ಇಲ್ಲಿನ ದಶಾಶ್ವಮೇಧ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ಮಾಜಿ ಕಾರ್ಪೋರೇಟರ್‌ ವಿಜಯ್‌ ಯಾದವ್‌ ದೂರು ನೀಡಿದ್ದಾರೆ.

            ದಾಳಿಕೋರರು ತಮ್ಮ ಕುಟುಂಬದವರೆಲ್ಲರನ್ನೂ ಹತ್ಯೆ ಮಾಡುವ ಉದ್ದೇಶ ಹೊಂದಿದ್ದಾಗಿ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರಿನ ಅನ್ವಯ ಅಂಕಿತ್‌ ಯಾದವ್‌, ಶೋಭಿತ್‌ ವರ್ಮಾ, ಗೋವಿಂದ್‌ ಯಾದವ್‌, ಸಾಹಿಲ್‌ ಯಾದವ್‌ ಹಾಗೂ ಇತರರ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

               ದಾಳಿಯಲ್ಲಿ ಗಾಯಗೊಂಡಿದ್ದ ನಿರ್ಭಯ್‌ ಯಾದವ್‌(6), ಕಿರಣ್‌ ಯಾದವ್‌, ಉಮೇಶ್‌ ಯಾದವ್‌, ದಿನೇಶ್‌ ಯಾದವ್‌ ಹಾಗೂ ಶುಭಂ ಅಲಿಯಾಸ್‌ ಗೋಲು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ದಶಾಶ್ವಮೇಧ ಪೊಲೀಸ್‌ ಠಾಣಾಧಿಕಾರಿ ರಾಕೇಶ್‌ ಪಾಲ್‌ ಅವರನ್ನು ಅಮಾನತು ಮಾಡಲಾಗಿದೆ ಎಂದು ಪೊಲೀಸ್‌ ಆಯುಕ್ತ ಮೋಹಿತ್‌ ಅಗರ್‌ವಾಲ್‌ ತಿಳಿಸಿದ್ದಾರೆ.

                ದಾಳಿಕೋರರನ್ನು ಬಂಧಿಸಲು ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಉತ್ತರ ಪ್ರದೇಶ ಗ್ಯಾಂಗ್‌ಸ್ಟರ್ಸ್‌ ಮತ್ತು ಸಮಾಜ ವಿರೋಧಿ ಚಟುವಟಿಕೆಗಳ ತಡೆ ಕಾಯ್ದೆ ಹಾಗೂ ರಾಷ್ಟ್ರೀಯ ಭದ್ರತಾ ಕಾಯ್ದೆಯ ಪ್ರಕಾರ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಪಿ ಪ್ರಮೋದ್‌ ಕುಮಾರ್‌ ತಿಳಿಸಿದ್ದಾರೆ.


Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries