HEALTH TIPS

ಮಳೆ ಬಿರುಸು: ಈ ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ

Top Post Ad

Click to join Samarasasudhi Official Whatsapp Group

Qries

               ತಿರುವನಂತಪುರಂ: ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೋಝಿಕ್ಕೋಡ್, ವಯನಾಡ್, ಪಾಲಕ್ಕಾಡ್, ಇಡುಕ್ಕಿ, ಅಲಪ್ಪುಳ ಮತ್ತು ತ್ರಿಶೂರ್ ಜಿಲ್ಲೆಗಳ ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಇಂದು (ಜುಲೈ 17) ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

            ಅಂಗನವಾಡಿಗಳಿಗೂ ರಜೆ ಅನ್ವಯಿಸುತ್ತದೆ. ಪೂರ್ವ ನಿಗದಿತ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

             ಭಾರೀ ಮಳೆಯ ಕಾರಣ ಗುಡ್ಡಗಾಡು ಪ್ರದೇಶಗಳಿಗೆ ರಾತ್ರಿ ಪ್ರಯಾಣವನ್ನು ಸಾಧ್ಯವಾದಷ್ಟು ನಿಯಂತ್ರಿಸಬೇಕು. ಅಟ್ಟಪ್ಪಾಡಿ, ಪರಂಬಿಕುಳಂ ಮತ್ತು ನೆಲ್ಲಿಯಂಪತಿ ಪ್ರದೇಶಗಳಿಗೆ ಜುಲೈ 16 (ನಿನ್ನೆ) ರಿಂದ ಜುಲೈ 21 ರವರೆಗೆ ರಾತ್ರಿ ಪ್ರಯಾಣವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಂಜೆ 6ರಿಂದ ಬೆಳಗ್ಗೆ 6ರವರೆಗೆ ನಿರ್ಬಂಧ ಹೇರಲಾಗಿದೆ. ಜಲಪಾತ ಪ್ರದೇಶಗಳಿಗೆ ಭೇಟಿ ನೀಡಲು ಸಹ ನಿಯಂತ್ರಿಸಲಾಗಿದೆ. 

               ಕೊಟ್ಟಾಯಂ ಜಿಲ್ಲೆಯ ಪ್ರವಾಸಿ ತಾಣಗಳಾದ ಇಲವಿಜಪೂಂಚಿರಾ, ಇಲ್ಲಿಕಲ್ ಕಲ್ಲ್ ಮತ್ತು ಮರ್ಮಲ ಹೊಳೆ ಪ್ರವೇಶವನ್ನು ಸಹ ನಿಷೇಧಿಸಲಾಗಿದೆ. ಈರಾಟುಪೇಟೆ-ವಾಗಮಾನ್ ರಸ್ತೆಯಲ್ಲಿ ರಾತ್ರಿ ಪ್ರಯಾಣವನ್ನು ನಿಷೇಧಿಸಲಾಗಿದೆ.



Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries