HEALTH TIPS

ತ್ರಿಪುರಾ | ಪ್ರವಾಹ, ಭೂಕುಸಿತ: 10 ಮಂದಿ ಸಾವು

          ಗರ್ತಲಾ: ತ್ರಿಪುರಾದಲ್ಲಿ ಭೂಕುಸಿತ ಮತ್ತು ಪ್ರವಾಹ ಸಂಬಂಧಿತ ಘಟನೆಗಳಲ್ಲಿ ಈವರೆಗೆ (ಭಾನುವಾರದಿಂದ-ಗುರುವಾರ) ಕನಿಷ್ಠ 10 ಜನ ಮೃತಪಟ್ಟಿದ್ದು, ಒಬ್ಬರು ನಾಪತ್ತೆಯಾಗಿದ್ದಾರೆ. 32,750 ಜನ 330 ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ ಎಂದು ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ.

        ರಕ್ಷಣಾ ಕಾರ್ಯಾಚರಣೆಗೆ ನೆರವು ನೀಡುವಂತೆ ಮುಖ್ಯಮಂತ್ರಿ ಮಾಣಿಕ್ ಸಹಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಮಾಡಿದ ಬಳಿಕ ನಾಲ್ಕು ಹೆಚ್ಚುವರಿ ಎನ್‌ಡಿಆರ್‌ಎಫ್ ತಂಡಗಳು ರಾಜ್ಯಕ್ಕೆ ಆಗಮಿಸಿವೆ.

           ಭಾನುವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ, ಎಲ್ಲಾ ಪ್ರಮುಖ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ. ಹಲವಾರು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ರಾಜ್ಯದಲ್ಲಿ ಸುಮಾರು 1,900 ಭೂಕುಸಿತಗಳು ಸಂಭವಿಸಿದ್ದು, ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ ಎಂದು ವರದಿಯಾಗಿದೆ.

             ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್), ಎನ್‌ಡಿಆರ್‌ಎಫ್, ಅಸ್ಸಾಂ ರೈಫಲ್ಸ್ ಸೇರಿದಂತೆ ಕೇಂದ್ರ ಅರೆಸೇನಾ ಪಡೆಗಳು ವಿಪತ್ತು ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿವೆ.

              ಗುರುವಾರ ಭಾರಿ ಮಳೆಯಾಗಲಿದ್ದು, ಪಶ್ಚಿಮ ತ್ರಿಪುರಾ ಮತ್ತು ಸೆಪಹಿಜಾಲಾ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries