ಕಾಸರಗೋಡು: ರಾಜ್ಯ ಅರಣ್ಯ ಮತ್ತು ವನ್ಯಜೀವಿ ಇಲಾಖೆಯು ಜೀವವೈವಿಧ್ಯ ಸಂರಕ್ಷಣೆ ಕ್ಷೇತ್ರದಲ್ಲಿ ಶ್ಲಾಘನೀಯ ಕಾರ್ಯ ನಡೆಸಿರುವವರನ್ನು ಗುರುತಿಸುವ ನಿಟ್ಟಿನಲ್ಲಿ ವನಮಿತ್ರ ಪ್ರಶಸ್ತಿಯನ್ನು ನೀಡುತ್ತಿದೆ. ಪ್ರಶಸ್ತಿಯು ರೂ.25000 ನಗದು ಮತ್ತು ಫಲಕವನ್ನು ಒಳಗೊಂಡಿದೆ.
ಅರಣ್ಯ, ಔಷಧೀಯ ಸಸ್ಯಗಳು, ಕೃಷಿ, ಜೀವವೈವಿಧ್ಯ ಇತ್ಯಾದಿಗಳನ್ನು ರಕ್ಷಿಸುವ ಚಟುವಟಿಕೆಗಳಿಗಾಗಿ ಪ್ರತಿ ಜಿಲ್ಲೆಯಿಂದ ಒಂದು ಪ್ರಶಸ್ತಿಯನ್ನು ನೀಡಲಾಗುತ್ತದೆ. ಕಾಸರಗೋಡು ಜಿಲ್ಲೆಯ ಆಸಕ್ತ ವ್ಯಕ್ತಿಗಳು, ಶಿಕ್ಷಣ ಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು ಮತ್ತು ರೈತರು ಆಗಸ್ಟ್ 31 ರ ಮೊದಲು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ಸಾಮಾಜಿಕ ಅರಣ್ಯ ವಿಭಾಗ, ಉದಯಗಿರಿ, ವಿದ್ಯಾನಗರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಈ ಬಗ್ಗೆ ಮಾಹಿತಿಗಗಿ ದೂರವಾಣಿ ಸಂಖ್ಯೆ(04994 255234)ಸಂಪರ್ಕಿಸುವAತೆ ಪ್ರಕಟಣೆ ತಿಳಿಸಿದೆ.