HEALTH TIPS

ಮಧ್ಯಪ್ರದೇಶ | ಬೆಟ್ಟದ ಮೇಲೆ ಸಿಲುಕಿಕೊಂಡ 8 ಮಂದಿ ರಕ್ಷಿಸಿದ ಎಸ್‌ಡಿಇಆರ್‌ಎಫ್

          ಶಿವಪುರಿ: ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯ ಬೆಟ್ಟವೊಂದರ ದೇವಸ್ಥಾನದ ಬಳಿ ಹೊಳೆ ನೀರಿನ ಮಟ್ಟ ಹೆಚ್ಚಿದ ಕಾರಣದಿಂದಾಗಿ ಸಿಲುಕಿಕೊಂಡಿದ್ದ 8 ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

            ಶಿವಪುರಿ ಜಿಲ್ಲೆಯ ಪೊಹ್ರಿ ಪಟ್ಟಣದ ಕೇದಾರೇಶ್ವರ ದೇವಸ್ಥಾನದ ಬಳಿ ಶನಿವಾರಈ ಘಟನೆ ನಡೆದಿದೆ ಎಂದು ಪೊಲೀಸ್ ಉಪವಿಭಾಗಾಧಿಕಾರಿ (ಎಸ್‌ಡಿಒಪಿ) ಸುರ್ಜೀತ್ ಸಿಂಗ್ ಭಡೋರಿಯಾ ಮಾಹಿತಿ ನೀಡಿದ್ದಾರೆ.

             ಹೊಳೆ ನೀರು ದಿಢೀರ್‌ ಹೆಚ್ಚಾದ ಪರಿಣಾಮ ಎಂಟು ಮಂದಿ ಬೆಟ್ಟದ ಮೇಲಿನ ದೇವಾಲಯದಲ್ಲಿ ಸಿಲುಕಿಕೊಂಡಿದ್ದರು. ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿದ ರಾಜ್ಯ ವಿಪತ್ತು ತುರ್ತು ನಿರ್ವಹಣಾ ಪಡೆ (ಎಸ್‌ಡಿಇಆರ್‌ಎಫ್) ಸಿಲುಕೊಂಡವರನ್ನು ರಕ್ಷಿಸಿದ್ದಾರೆ. ತಡರಾತ್ರಿಯವರೆಗೂ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು ಎಂದು ಸುರ್ಜೀತ್ ಸಿಂಗ್ ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries