HEALTH TIPS

ಎಎಪಿ-ಕಾಂಗ್ರೆಸ್ ಮೈತ್ರಿ ಕೇಜ್ರಿವಾಲ್ ಜೈಲಿಂದ ಬಂದ ಬಳಿಕ ತೀರ್ಮಾನ: ಸಿಸೋಡಿಯಾ

 ವದೆಹಲಿ: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಅರವಿಂದ ಕೇಜ್ರಿವಾಲ್ ಅವರು ಜೈಲಿನಿಂದ ಬಂದ ಬಳಿಕ ತೀರ್ಮಾನಿಸಲಾಗುವುದು ಎಂದು ಎಎಪಿಯ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ಪಿಟಿಐ ಸಂಪಾದಕರೊಂದಿಗೆ ನಡೆದ ಸಂವಾದದಲ್ಲಿ ಅವರು ಮಾತನಾಡಿದರು.

'ಇಂಡಿಯಾ ಒಕ್ಕೂಟವಾಗಿದ್ದ ಎಎಪಿಯು ಇತ್ತೀಚೆಗೆ ನಡೆದ ಲೋಕಸಭೆಯಲ್ಲಿ ಬಿಜೆಪಿಯನ್ನು ಕಟ್ಟಿಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿತ್ತು. ಆದರೆ ವಿಧಾನಸಭೆ ಚುನಾವಣೆಯೇ ಬೇರೆ' ಎಂದು ಹೇಳಿದ್ದಾರೆ.

'ಅರವಿಂದ ಕೇಜ್ರಿವಾಲ್ ಅವರು ಈಗಲೂ ಜೈಲಿನಲ್ಲಿದ್ದಾರೆ. ಅವರು ಶೀಘ್ರವೇ ಹೊರಬರಲಿದ್ದಾರೆ. ಬಳಿಕ ಈ ಪ್ರಶ್ನೆ ಕೇಳಿ ಅವರಿಂದ ಉತ್ತರ ಪಡೆದುಕೊಳ್ಳಬಹುದು' ಎಂದು ಹೇಳಿದ್ದಾರೆ. ಅಲ್ಲದೆ ಹರಿಯಾಣ ಚುನಾವಣೆಯಲ್ಲಿ ಮೈತ್ರಿಯ ಬಗ್ಗೆಯೂ ಕೇಜ್ರಿವಾಲ್ ಅವರೇ ನಿರ್ಧರಿಸಲಿದ್ದಾರೆ ಎಂದಿದ್ದಾರೆ.

ಪ್ರತಿ ಚುನಾವಣೆಯಲ್ಲಿಯೂ ಸವಾಲುಗಳಿರುತ್ತವೆ. ಈ ಬಾರಿಯ ದೆಹಲಿ ಚುನಾವಣೆಯಲ್ಲೂ ನಮಗೆ ಸವಾಲುಗಳಿವೆ. ಅದಕ್ಕೆ ನಾವು ಉತ್ತರಿಸಲಿದ್ದೇವೆ' ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, 'ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯನ್ನು ದುರ್ಬಳಕೆ ಮಾಡುತ್ತಿದೆ. ನಾನು ಕೇಜ್ರಿವಾಲ್ ಅವರ ಬಗ್ಗೆ ಮಾತ್ರ ಮಾತನಾಡುತ್ತಿಲ್ಲ. ಭವಿಷ್ಯದಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಅವರೂ ಜೈಲಿಗೆ ಹೋಗಬಹುದು. ಹೇಮಂತ್ ಸೊರೇನ್ ಅವರು ಜೈಲಿಗೆ ಹೋದರು. ಪವಾರ್ ಅವರ ಪಕ್ಷವನ್ನೇ ಒಡೆಯಲಾಯಿತು' ಎಂದು ಹೇಳಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries