HEALTH TIPS

ಇಂದು ಬಿರುಸಿನ ಮಳೆ ಸಾಧ್ಯತೆ-ಆರೆಂಜ್ ಅಲರ್ಟ್ ಘೋಷಣೆ

               ಕಾಸರಗೋಡು: ಬಿರುಸಿನ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಕೇಂದ್ರ ಹವಾಮಾನ ಇಲಾಖೆಯು ಆಗಸ್ಟ್ 30 ರಂದು ಕಾಸರಗೋಡು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ನಿಗದಿತ  ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು,  24 ಗಂಟೆಗಳಲ್ಲಿ 115.6 ಮಿಮೀ ನಿಂದ 204.4 ಮಿಮೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. ಆಗಸ್ಟ್ 31, ಸೆಪ್ಟೆಂಬರ್ 1 ಮತ್ತು ಎರಡು ರಂದು ಜಿಲ್ಲೆಯಲ್ಲಿ ಕೇಂದ್ರ ಹವಾಮಾನ ಇಲಾಖೆ ಈಗಾಗಲೇ ಯೆಲ್ಲೋ ಅಲರ್ಟ್ ಘೋಷಿಸಿದೆ.

ಸಾರ್ವಜನಿಕರಿಗೆ ಎಚ್ಚರಿಕೆ:

              ಭೂಕುಸಿತ, ಮತ್ತು ಪ್ರವಾಹಕ್ಕೆ ಒಳಗಾಗುವ ಪ್ರದೇಶಗಳಲ್ಲಿ ವಾಸಿಸುವ ಜನರು ಅಧಿಕಾರಿಗಳ ಸೂಚನೆಯಂತೆ ಸುರಕ್ಷಿತ ಜಾಗಕ್ಕೆ ಸ್ಥಳಾಂತರಗೊಳ್ಳುವಂತೆ ಸೂಚಿಸಲಾಗಿದೆ. ನದಿ ದಡಗಳಲ್ಲಿ ಮತ್ತು ಅಣೆಕಟ್ಟುಗಳ ಕೆಳಭಾಗದಲ್ಲಿ ವಾಸಿಸುವ ನಿವಾಸಿಗಳು ಸಹ ಅಪಾಯದ ಮುನ್ನೆಚ್ಚರಿಕೆ ಪರಿಗಣಿಸಿ ಅಧಿಕಾರಿಗಳ ಸೂಚನೆಗಳ ಪ್ರಕಾರ ಸ್ಥಳಾಂತರಗೊಳ್ಳಬೇಕು.

               ವಿಪತ್ತು ಪೀಡಿತ ಪ್ರದೇಶಗಳಲ್ಲಿ ವಾಸಿಸುವ ಜನರು ತಮ್ಮ ಪ್ರದೇಶದಲ್ಲಿ ಶಿಬಿರಗಳನ್ನು ತೆರೆದಿರುವುದನ್ನು ಖಚಿತಪಡಿಸಿಕೊಂಡು ಹಗಲಿನಲ್ಲಿ ಅಲ್ಲಿಗೆ ತೆರಳಬೇಕು. ಇದಕ್ಕಾಗಿ ಸ್ಥಳೀಯಾಡಳಿತ ಮತ್ತು ಕಂದಾಯ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries