ಬದಿಯಡ್ಕ: ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಉಪ್ಪನಂಗಡಿ ಕಜಾರ್ ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಅಬ್ದುಲ್ ಕರೀಂ(40)ಎಂಬಾತನನ್ನು ಬದಿಯಡ್ಕ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶನಿವಾರ ಕುಂಬಳೆಯಿಂದ ಬದಿಯಡ್ಕ ಆಗಮಿಸುತ್ತಿದ್ದ ಖಾಸಗಿ ಬಸ್ನಲ್ಲಿ ಘಟನೆ ನಡೆದಿದೆ. ಬೇಳದ ಕಾಲೇಜಿಗೆ ಆಗಮಿಸುತ್ತಿದ್ದ ಮೊಗ್ರಾಲ್ ನಿವಾಸಿ ವಿದ್ಯಾರ್ಥಿನಿ ಮೈಮುಟ್ಟಿ ಕಿರುಕುಳ ನೀಡಿದ್ದಾನೆ. ಒಂದು ಬಾರಿ ಕಿರುಕುಳ ನೀಡಿದ್ದು, ಇದರಿಂದ ಸುಮ್ಮನಿದ್ದ ವಿದ್ಯಾರ್ಥಿನಿ, ಕಿರುಕುಳ ಮುಂದುವರಿಸಿದಾಗ ಈ ಬಗ್ಗೆ ಬಸ್ ಸಿಬ್ಬಂದಿ ಹಾಗೂ ಸಹಪ್ರಯಾಣಿಕರಿಗೆ ಮಾಹಿತಿ ನೀಡಿದ್ದಳು. ವಿಷಯ ತಿಳಿಯುತ್ತಿದ್ದಂತೆ ಸಾರ್ವಜನಿಕರು ಆರೋಪಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ಬಸ್ಸನ್ನು ನೇರವಾಗಿ ಬದಿಯಡ್ಕ ಠಾಣೆಗೆ ತಲುಪಿಸಿ, ಆರೋಪಿಯನ್ನು ಪೊಲೀಸರ ವಶಕ್ಕೊಪ್ಪಿಸಲಾಗಿದೆ. ವಿದ್ಯಾರ್ಥಿನಿ ಮನೆಯವರ ದೂರಿನ ಮೇರೆಗೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.