HEALTH TIPS

ಕಾಸರಗೋಡು ಜಿಲ್ಲಾ ಕುಲಾಲ ಸಂಘ ಮಹಾಸಭೆ

          ಮಂಜೇಶ್ವರ : ಕಾಸರಗೋಡು ಜಿಲ್ಲಾ ಕುಲಾಲ ಸಂಘ ಮಂಜೇಶ್ವರ,ತೂಮಿನಾಡು ಕುಂಜತ್ತೂರು ಇದರ 40 ನೇ ವಾರ್ಷಿಕ ಮಹಾಸ¨S್ವ ಇತ್ತೀಚೆಗೆ ಜಿಲ್ಲಾ ಕುಲಾಲ ಸಮುದಾಯ ಭವನ ತೂಮಿನಾಡು ಕುಂಜತ್ತೂರುನಲ್ಲಿ ಜರಗಿತು. ಕಾಸರಗೋಡು ಜಿಲ್ಲಾ ಕುಲಾಲ ಸಂಘದ ಅಧ್ಯಕ್ಷ ನ್ಯಾಯವಾದಿ ರವೀಂದ್ರ ಮುನ್ನಿಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕುಲಾಲ ಸಂಘದ ಕಾರ್ಯದರ್ಶಿ ದಾಮೋದರ ಮಾಸ್ತರ್ ಕಬ್ಬಿನಹಿತ್ಲು, ಜಿಲ್ಲಾ ಕುಲಾಲ ಸಂಘದ ಕಟ್ಟಡ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಸಂಘದ ಕೋಶಾಧಿಕಾರಿ ಬಾಲಕೃಷ್ಣ್ಣ ದೀಕ್ಷಾ ಉಪಸ್ಥಿತರಿದ್ದರು. ದಾಮೋದರ ಮಾಸ್ತರ್ ಕಬ್ಬಿನಹಿತ್ಲು 2023-24 ನೇ ಸಾಲಿನ ವರದಿ ವಾಚನ ಹಾಗೂ ಈಶ್ವರ್ ಕಣ್ವತೀರ್ಥ ರವರು 2023-24 ಸಾಲಿನ ಲೆಕ್ಕಪತ್ರ ಮಂಡಿಸಿದರು. ಸಂಘಟನಾ ಸಂಚಾಲಕ ಸುಧೀರ್ ರಂಜನ್ ದೈಗೋಳಿ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ದಾಮೋದರ ಮಾಸ್ತರ್ ಕಬ್ಬಿನಹಿತ್ಲು ವಂದಿಸಿದರು. ಕು. ರಶ್ಮಿತಾ ಹಾಗೂ ಕು. ಭುವಿರವರ ಪ್ರಾರ್ಥನೆಗೈದರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries