HEALTH TIPS

ಯಕ್ಷಪುತ್ಥಳಿ ಬೊಂಬೆ ಮನೆಗೆ ರಾಷ್ಟ್ರ ಪ್ರವಾಸೋದ್ಯಮ ನಕಾಶೆಯಲ್ಲಿ ಸ್ಥಾನ ಲಭಿಸಲಿ-ಕಗಅಪ್ರಾ ಅಧ್ಯಕ್ಷ ಸೋಮಣ್ಣ ಬೇವಿನಮರದ ಒತ್ತಾಯ

       ಕಾಸರಗೋಡು: ನಯನ ಮನೋಹರ ಚಂದ್ರಗಿರಿಯ ತೀರದಲ್ಲಿ ನೆಲೆನಿಂತಿರುವ ಯಕ್ಷಪುತ್ಥಳಿ ಬೊಂಬೆ ಮನೆಗೆ ರಾಷ್ಟ್ರದ ಪ್ರವಾಸೋದ್ಯಮ ನಕಾಶೆಯಲ್ಲಿ ವಿಶೇಷ ಸ್ಥಾನ ಕಲ್ಪಿಸಲು ಕೇಂದ್ರ, ರಾಜ್ಯ ಸರ್ಕಾರಗಳು ಮುಂದಾಗಬೇಕು ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಹೇಳಿದರು.

       ಅವರು ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಕಲಾ-ದೀಕ್ಷಾ (ಗುರು ಶಿಷ್ಯ ಪರಂಪರೆ) ಯೋಜನೆಯನ್ವಯ ಕಾಸರಗೋಡು ಪಿಲಿಕುಂಜೆಯ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ಯಕ್ಷಪುತ್ಥಳಿ ಬೊಂಬೆಮನೆಯಲ್ಲಿ ಯಕ್ಷಗಾನ ಬೊಂಬೆಯಾಟ ಕಲಿಕಾ ತರಗತಿ ಉದ್ಘಾಟಿಸಿ ಮಾತನಾಡಿದರು. ಕರ್ನಾಟಕದಿಂದ ಹೊರಗುಳಿದಿರುವ ಅಚ್ಚಗನ್ನಡ ಪ್ರದೇಶವಾದ ಗಡಿನಾಡು ಕಾಸರಗೋಡಿನಲ್ಲಿ ಪ್ರಾಚೀನ ಹಾಗೂ ಪರಂಪರಾಗತ ಕಲೆ ಯಕ್ಷಗಾನ ಬೊಂಬೆಯಾಟಕ್ಕೆ ಕಾಯಕಲ್ಪ ನೀಡುತ್ತಿರುವ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ಸಾಧನೆ ಸ್ತುತ್ಯರ್ಹ ಎಂದು ತಿಳಿಸಿದರು.  

        ಹಿರಿಯ ಕವಿ, ಪತ್ರಕರ್ತ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಅಧ್ಯಕ್ಷತೆ ವಹಿಸಿದ್ದರು.  ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ಸದಸ್ಯ ಎ.ಆರ್. ಸುಬ್ಬಯ್ಯಕಟ್ಟೆ, ಪೆÇ್ರಫೆಸರ್ ಎ. ಶ್ರೀನಾಥ್, ಡಾ.  ಸದಾನಂದ ಪೆರ್ಲ,  ಜಗದೀಶ ಕೂಡ್ಲು,  ಮನೋರಮ ಎಡನೀರು ಮೊದಲಾದವರು ಉಪಸ್ಥಿತರಿದ್ದರು. ಸಂಸ್ಥೆಯ ನಿರ್ದೇಶಕ ಹಾಗೂ ಪ್ರಧಾನ ಸೂತ್ರಧಾರಿ ಕೆ. ವಿ. ರಮೇಶ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭ ಬೊಂಬೆಯಾಟ ಪ್ರದರ್ಶನ ಜರಗಿತು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries