HEALTH TIPS

ಕನ್ನಡಭವನದಲ್ಲಿ ಸ್ಪಂದನ ಸಿರಿ ಸಾಹಿತ್ಯ ಸಂಭ್ರಮಕ್ಕೆ ಸಿದ್ಧತೆ


                ಕಾಸರಗೋಡು : ಹಾಸನದ ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ, ಸಂಸ್ಥೆಯ ಕಾಸರಗೋಡು ಜಿಲ್ಲಾ ಘಟಕ, ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯ ಹಾಗೂ ಕಾಸರಗೋಡಿನ ಕನ್ನಡ ಭವನ ಪ್ರಕಾಶನದ ಜಂಟಿ ಆಶ್ರಯದಲ್ಲಿ 2024 ಸೆಪ್ಟೆಂಬರ್ 15ರಂದು ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ ಬಯಲು ರಂಗಮAದಿರದಲ್ಲಿ ಸ್ಪಂದನ ಸಿರಿ ಕಾಸರಗೋಡು ಜಿಲ್ಲಾ ಸಾಹಿತ್ಯ ಮತ್ತು ಸಂಸ್ಕೃತಿ ಸಂಭ್ರಮ ಕನ್ನಡ ಸಮ್ಮೇಳನವನ್ನು ಆಯೋಜಿಸಲಾಗಿದೆ. 

             ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ, ಶಿಕ್ಷಣತಜ್ಞ ವಿ ಬಿ ಕುಳಮರ್ವ ಅವರನ್ನು ಆಯ್ಕೆ ಮಾಡಲಾಗಿದೆ.  ಸಮಾವೇಶದಲ್ಲಿ 'ಕನ್ನಡ ಶಾಲೆಗಳ ಉಳಿವಿನಲ್ಲಿ ಶಿಕ್ಷಕರ ಪಾತ್ರ' ಕುರಿತಾಗಿ ಸಂವಾದ, ಕೃಷಿ ವಿಚಾರ ಗೋಷ್ಠಿ, ' ಕೃಷಿ ಅಭಿವೃದ್ಧಿಯಲ್ಲಿ ಗ್ರಾಹಕರ ಪಾತ್ರ' ಕುರಿತು ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಎಂದು ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷೆ ಕಲಾವತಿ ಮಧುಸೂದನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries