HEALTH TIPS

ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ವೇಗ ನಿರ್ಬಂಧ

 ಮಂಗಳೂರು : ಕರಾವಳಿ ಕರ್ನಾಟಕ ಭಾಗದಲ್ಲಿ ನಿರಂತರ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಗೆ ಅಲ್ಲಲ್ಲಿ ಹಾನಿಯಾಗಿದ್ದು ಹೆಚ್ಚಿನ ವೇಗದ ಸಂಚಾರ ಅಸುರಕ್ಷಿತವಾಗಿದೆ. ರಾಷ್ಟ್ರೀಯ ಹೆದ್ದಾರಿಯ ಬಳಕೆದಾರರ ಸುರಕ್ಷತೆಯ ಹಿತದೃಷ್ಟಿಯಿಂದ, ರಾಷ್ಟ್ರೀಯ ಹೆದ್ದಾರಿ ಆಡಳಿತವು ಜಿಲ್ಲೆಯ ಎನ್‌ಎಚ್-66ನಲ್ಲಿ ಸುರತ್ಕಲ್‌ನಿಂದ ತೊಕ್ಕೊಟ್ಟು ಜಂಕ್ಷನ್‌ವರೆಗೆ ಮತ್ತು ಬಿ.ಸಿ ರೋಡ್ ನಿಂದ ನಂತೂರು ಜಂಕ್ಷನ್ ವರೆಗೆ ಎನ್‌ಎಟಚ್-73 ರಲ್ಲಿ ದ್ವಿಚಕ್ರ, ತ್ರಿಚಕ್ರ ಮತ್ತು ಘನ ವಾಹನಗಳನ್ನು ಗಂಟೆಗೆ 40 ಕಿ.ಮೀ.ಗೆ ನಿರ್ಬಂಧಿಸಲಾಗಿದೆ.

ನಿರಂತರ ಮಳೆಯಿಂದಾಗಿ, ರಾಷ್ಟ್ರೀಯ ಹೆದ್ದಾರಿ ಬಳಕೆದಾರರಿಗೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಗಂಟೆಗೆ 60 ಕಿಮೀ ವೇಗದ ಮಿತಿಯಲ್ಲಿ ಚಾಲನೆ ಮಾಡಲು ಸಲಹೆ ನೀಡಲಾಗಿದೆ ಎಂದು ಭಾರತೀಯ ಹೆದ್ದಾರಿ ಪ್ರಾಧಿಕಾರ ಯೋಜನೆ ಅನುಷ್ಟಾನ ಘಟಕ ಇಲ್ಲಿನ ಯೋಜನಾ ನಿರ್ದೇಶಕರು ಮತ್ತು ಹೆದ್ದಾರಿ ನಿರ್ವಾಹಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries