HEALTH TIPS

ಮೇಕೆಗಳ ಮಾರಾಟ ವಿಚಾರವಾಗಿ ಗಲಾಟೆ; ತಾಯಿಯನ್ನು ಕೊಂದು ಬೆಂಕಿ ಹಚ್ಚಿದ ಮಗ

 ಸೋನಭದ್ರ : ಇಲ್ಲಿನ ಬಛ್ರಾ ಗ್ರಾಮದಲ್ಲಿ ಮೇಕೆಗಳನ್ನು ಮಾರಾಟ ಮಾಡಿದ ವಿಚಾರವಾಗಿ ತಾಯಿ ಮತ್ತು ಮಗನ ನಡುವೆ ಶುಕ್ರವಾರ ರಾತ್ರಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. 50 ವರ್ಷದ ಮಹಿಳೆ ಕಮಲೇಶ್‌ ದೇವಿ ಎಂಬವರನ್ನು ಆಕೆಯ ಮಗ ಕುಶುನ್‌ ಬಿಹಾರಿ ಯಾದವ್‌ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾಗ್ವಾದದ ವೇಳೆ ತಾಯಿಯ ತಲೆಗೆ ಗಟ್ಟಿಯಾದ ವಸ್ತುವಿನಿಂದ ಬಲವಾಗಿ ಹೊಡೆದಿರುವ ಆರೋಪಿ, ದೇಹವನ್ನು ಬಟ್ಟೆಗಳಿಂದ ಮುಚ್ಚಿದ್ದಾನೆ. ನಂತರ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ತ್ರಿಭುವನ್‌ ನಾಥ್‌ ತ್ರಿಪಾಠಿ ಹೇಳಿದ್ದಾರೆ.

ಬೆಂಕಿ ಆವರಿಸುತ್ತಿದ್ದಂತೆ ನೆರೆ-ಹೊರೆಯವರು ಜಮಾಯಿಸಿದ್ದಾರೆ. ತಕ್ಷಣವೇ ಬೆಂಕಿ ನಂದಿಸಿದರಾದರೂ, ಅಷ್ಟೊತ್ತಿಗೆ ಮಹಿಳೆ ಮೃತಪಟ್ಟಿದ್ದರು ಎಂದೂ ತಿಳಿಸಿದ್ದಾರೆ.

ಆರೋಪಿಯನ್ನು ಬಂಧಿಸಲಾಗಿದೆ.

ಕಮಲೇಶ್‌ ದೇವಿ, ಯಾದವ್‌ ಮತ್ತು ಆತನ ಹೆಂಡತಿ ಒಂದೇ ಮನೆಯಲ್ಲಿ ವಾಸವಾಗಿದ್ದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries