ಪೆರ್ಲ: ಕಾಂಗ್ರೆಸ್ಸಿನ ಹಿರಿಯ ಮುಖಂಡ, ಮಾಜಿ ಜಿ.ಪಂ.ಸದಸ್ಯ ಸಿ.ಸಂಜೀವ ರೈ ಕೆಂಗಣಾಜೆ ಅವರನ್ನು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಅವರ ನಿವಾಸದಲ್ಲಿ ಪಕ್ಷದ ವತಿಯಿಂದ ಸನ್ಮಾನಿಸಲಾಯಿತು.
ಮಂಡಲ ಕಾಂಗ್ರೆಸ್ ಅಧ್ಯಕ್ಷ ಬಿ.ಎಸ್.ಗಾಂಭೀರ್ ಅಧ್ಯಕ್ಷತೆ ವಹಿಸಿದ್ದರು. ಡಿಸಿಸಿ ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಜೆ.ಎಸ್. ಪಕ್ಷದ ಹಿರಿಯ ಮುಖಂಡರಾದ ಮಿತ್ತೂರು ಪುರುಷೋತ್ತಮ ಭಟ್, ಅಮು ಅಡ್ಕಸ್ಥಳ, ವಕೀಲ ಸುಧಾಕರ ರೈ, ಹರಿಪ್ರಸಾದ್ ಶೆಟ್ಟಿ, ಲೋಕನಾಥ ಶೆಟ್ಟಿ ಮಾಯಿಲೆಂಗಿ, ಮಾಯಿಲ ನಾಯ್ಕ್, ಅಬ್ದುಲ್ ರಜಾಕ್, ಅಬ್ದುಲ್ ಕರೀಂ, ತುಕಾರಾಮ ಕಾಟುಕುಕ್ಕೆ ಮೊದಲಾದವರು ಉಪಸ್ಥಿತರಿದ್ದರು.