HEALTH TIPS

ಕೇದಾರನಾಥದಲ್ಲಿ ಹಾನಿಗೊಳಗಾದ ಹೆಲಿಕಾಪ್ಟರ್‌ ‌ಏರ್‌ ಲಿಫ್ಟ್ ಮಾಡುವಾಗ ಪತನ

          ಡೆಹ್ರಾಡೂನ್: ಉತ್ತರಾಖಂಡದ ಕೇದಾರನಾಥದಲ್ಲಿ ಲ್ಯಾಂಡಿಂಗ್ ವೇಳೆ ತುರ್ತು ಭೂಸ್ಪರ್ಶ ಮಾಡಿದ್ದ ಹೆಲಿಕಾಪ್ಟರ್ ಅನ್ನು ಹೊತ್ತೊಯ್ಯುತ್ತಿದ್ದ ವೇಳೆ ಎಂಐ-17 ಹೆಲಿಕಾಪ್ಟರ್‌ನಿಂದ ಜಾರಿ ಬಿದ್ದು ಮಂದಾಕಿನಿ ನದಿಯ ಬಳಿ ಪತನಗೊಂಡಿದೆ ಎಂದು ವರದಿಯಾಗಿದೆ.

             ತುರ್ತು ಭೂಸ್ಪರ್ಶ ಮಾಡಿದ್ದ ಹೆಲಿಕಾಪ್ಟರ್ ಅನ್ನು ದುರಸ್ತಿಗಾಗಿ ಗೌಚಾರ್ ಹೆಲಿಪ್ಯಾಡ್‌ಗೆ ಸಾಗಿಸಲಾಗುತ್ತಿತ್ತು.


                ಇದೇ ವೇಳೆ ಟೋಯಿಂಗ್ ಹಗ್ಗ ತುಂಡಾಗಿ ಹೆಲಿಕಾಪ್ಟರ್‌ ಪತನಗೊಂಡಿದೆ. ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

           ಅಪಘಾತಕ್ಕೀಡಾದ ಹೆಲಿಕಾಪ್ಟರ್ ಅನ್ನು ಖಾಸಗಿ ಕಂಪನಿಯೊಂದು ನಿರ್ವಹಿಸುತ್ತಿತ್ತು. ಮೇ 24ರಂದು ಕೇದಾರನಾಥ ದೇಗುಲಕ್ಕೆಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ವೇಳೆ ಈ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದಾಗಿ ತುರ್ತು ಭೂಸ್ಪರ್ಶ ಮಾಡಿತ್ತು.

             'ಎಂಐ-17 ಹೆಲಿಕಾಪ್ಟರ್‌ ಸಹಾಯದಿಂದ ಅಪಘಾತಕ್ಕೀಡಾದ ಹೆಲಿಕಾಪ್ಟರ್ ಅನ್ನು ಗೌಚಾರ್ ಹೆಲಿಪ್ಯಾಡ್‌ಗೆ ದುರಸ್ತಿಗಾಗಿ ಕೊಂಡೊಯ್ಯುವ ಯೋಜನೆ ಇತ್ತು. ಸ್ವಲ್ಪ ದೂರ ಕ್ರಮಿಸಿದ ತಕ್ಷಣ ಎಂಐ-17 ನಿಯಂತ್ರಣ ಕಳೆದುಕೊಂಡಿರುವುದರಿಂದ ಹೆಲಿಕಾಪ್ಟರ್‌ ಪತನಗೊಂಡಿದೆ. ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ' ಎಂದು ಜಿಲ್ಲಾ ಪ್ರವಾಸೋದ್ಯಮ ಅಧಿಕಾರಿ ರಾಹುಲ್ ಚೌಬೆ ತಿಳಿಸಿದ್ದಾರೆ.

             ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಅಪಘಾತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries