ಡೆಹ್ರಾಡೂನ್: ಉತ್ತರಾಖಂಡದ ಕೇದಾರನಾಥದಲ್ಲಿ ಲ್ಯಾಂಡಿಂಗ್ ವೇಳೆ ತುರ್ತು ಭೂಸ್ಪರ್ಶ ಮಾಡಿದ್ದ ಹೆಲಿಕಾಪ್ಟರ್ ಅನ್ನು ಹೊತ್ತೊಯ್ಯುತ್ತಿದ್ದ ವೇಳೆ ಎಂಐ-17 ಹೆಲಿಕಾಪ್ಟರ್ನಿಂದ ಜಾರಿ ಬಿದ್ದು ಮಂದಾಕಿನಿ ನದಿಯ ಬಳಿ ಪತನಗೊಂಡಿದೆ ಎಂದು ವರದಿಯಾಗಿದೆ.
ಡೆಹ್ರಾಡೂನ್: ಉತ್ತರಾಖಂಡದ ಕೇದಾರನಾಥದಲ್ಲಿ ಲ್ಯಾಂಡಿಂಗ್ ವೇಳೆ ತುರ್ತು ಭೂಸ್ಪರ್ಶ ಮಾಡಿದ್ದ ಹೆಲಿಕಾಪ್ಟರ್ ಅನ್ನು ಹೊತ್ತೊಯ್ಯುತ್ತಿದ್ದ ವೇಳೆ ಎಂಐ-17 ಹೆಲಿಕಾಪ್ಟರ್ನಿಂದ ಜಾರಿ ಬಿದ್ದು ಮಂದಾಕಿನಿ ನದಿಯ ಬಳಿ ಪತನಗೊಂಡಿದೆ ಎಂದು ವರದಿಯಾಗಿದೆ.
ಅಪಘಾತಕ್ಕೀಡಾದ ಹೆಲಿಕಾಪ್ಟರ್ ಅನ್ನು ಖಾಸಗಿ ಕಂಪನಿಯೊಂದು ನಿರ್ವಹಿಸುತ್ತಿತ್ತು. ಮೇ 24ರಂದು ಕೇದಾರನಾಥ ದೇಗುಲಕ್ಕೆಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ವೇಳೆ ಈ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದಾಗಿ ತುರ್ತು ಭೂಸ್ಪರ್ಶ ಮಾಡಿತ್ತು.
'ಎಂಐ-17 ಹೆಲಿಕಾಪ್ಟರ್ ಸಹಾಯದಿಂದ ಅಪಘಾತಕ್ಕೀಡಾದ ಹೆಲಿಕಾಪ್ಟರ್ ಅನ್ನು ಗೌಚಾರ್ ಹೆಲಿಪ್ಯಾಡ್ಗೆ ದುರಸ್ತಿಗಾಗಿ ಕೊಂಡೊಯ್ಯುವ ಯೋಜನೆ ಇತ್ತು. ಸ್ವಲ್ಪ ದೂರ ಕ್ರಮಿಸಿದ ತಕ್ಷಣ ಎಂಐ-17 ನಿಯಂತ್ರಣ ಕಳೆದುಕೊಂಡಿರುವುದರಿಂದ ಹೆಲಿಕಾಪ್ಟರ್ ಪತನಗೊಂಡಿದೆ. ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ' ಎಂದು ಜಿಲ್ಲಾ ಪ್ರವಾಸೋದ್ಯಮ ಅಧಿಕಾರಿ ರಾಹುಲ್ ಚೌಬೆ ತಿಳಿಸಿದ್ದಾರೆ.
ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ಅಪಘಾತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.