HEALTH TIPS

ಉತ್ತರ ಪ್ರದೇಶ: ಹಳಿ ತಪ್ಪಿದ ಸಾಬರಮತಿ ಎಕ್ಸ್‌ಪ್ರೆಸ್ ರೈಲು, ತಪ್ಪಿದ ಭಾರಿ ಅನಾಹುತ

 ಖನೌ: ಉತ್ತರ ಪ್ರದೇಶದಲ್ಲಿ ಇಂದು (ಶನಿವಾರ) ಮುಂಜಾನೆ ಸಾಬರಮತಿ ಎಕ್ಸ್‌ಪ್ರೆಸ್ ರೈಲಿನ 22 ಬೋಗಿಗಳು ಹಳಿತಪ್ಪಿವೆ. ಕಾನ್ಪುರ ಮತ್ತು ಭೀಮಸೇನ್ ನಿಲ್ದಾಣದ ನಡುವಿನ ಬ್ಲಾಕ್ ವಿಭಾಗದಲ್ಲಿ ಘಟನೆ ಸಂಭವಿಸಿದೆ ಎಂದು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.

ಘಟನೆಯಲ್ಲಿ ಪ್ರಯಾಣಿಕರು ಗಾಯಗೊಂಡಿರುವ ಬಗ್ಗೆ ವರದಿಯಾಗಿಲ್ಲ.

ಪ್ರಯಾಣಿಕರನ್ನು ಕಾನ್ಪುರಕ್ಕೆ ಕರೆದೊಯ್ಯಲು ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಭಾರತೀಯ ರೈಲ್ವೆ ಸಚಿವಾಲಯ ತಿಳಿಸಿದೆ.


ಕಲ್ಲು ಬಂಡೆಯೊಂದು ರೈಲಿನ ಎಂಜಿನ್‌ಗೆ ಬಡಿಯಿತು. ಇದರಿಂದಾಗಿ ಎಂಜಿನ್‌ಗೆ ಹೆಚ್ಚು ಹಾನಿಯಾಗಿದೆ ಎಂದು ಚಾಲಕ ತಿಳಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ತುರ್ತು ಸಹಾಯವಾಣಿಯನ್ನು ಆರಂಭಿಸಲಾಗಿದೆ ಎಂದು ರೈಲ್ವೆ ಸಚಿವಾಲಯ ಮಾಹಿತಿ ನೀಡಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries