HEALTH TIPS

ಕೋಚಿಂಗ್ ಸೆಂಟರ್ ದುರಂತ: ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಸುಪ್ರೀಂ ಕೋರ್ಟ್

         ವದೆಹಲಿ: ನೆಲಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್‌ಗೆ ನೀರು ನುಗ್ಗಿ ಇಬ್ಬರು ಯುಪಿಎಸ್‌ಸಿ ಆಕಾಂಕ್ಷಿಗಳು ಸಾವಿಗೀಡಾದ ಘಟನೆ ಸಂಬಂಧ, ಸೋಮವಾರ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಸುಪ್ರೀಂ ಕೋರ್ಟ್‌, ವಿವರಣೆ ಕೇಳಿ ಕೇಂದ್ರ ಹಾಗೂ ದೆಹಲಿ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

          'ಕೋಚಿಂಗ್ ಸೆಂಟರ್‌ಗಳು ಸಾವಿನ ಚೇಂಬರ್‌ಗಳಾಗಿ ಮಾರ್ಪಟ್ಟಿವೆ. ಸುರಕ್ಷತಾ ನಿಯಮಗಳು ಮತ್ತು ಗೌರವಯುತ ಜೀವನಕ್ಕಾಗಿ ಮೂಲಭೂತ ಮಾನದಂಡಗಳ ಸಂಪೂರ್ಣ ಪಾಲನೆ ಮಾಡದಿದ್ದರೆ ಕೋಚಿಂಗ್ ಸಂಸ್ಥೆಗಳು ಆನ್‌ಲೈನ್‌ನಲ್ಲಿ ಕಾರ್ಯನಿರ್ವಹಿಸಬಹುದು. ಕೋಚಿಂಗ್ ಸೆಂಟರ್‌ಗಳು ದೇಶದ ವಿವಿಧ ಭಾಗಗಳಿಂದ ಬರುವ ಆಕಾಂಕ್ಷಿಗಳ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿವೆ' ಎಂದು ನ್ಯಾಯಮೂರ್ತಿಗಳಾದ ಸೂರ್ಯಕಾಂತ ಹಾಗೂ ಉಜ್ಜಲ್ ಭುಯನ್ ಅವರಿದ್ದ ಪೀಠ ಕಟು ಮಾತುಗಳಲ್ಲಿ ಹೇಳಿತು.

            ಇದೊಂದು ಎಲ್ಲರ ಕಣ್ಣು ತೆರೆಸಬೇಕಾದ ಘಟನೆ ಎಂದು ಪೀಠ ಕಾಳಜಿ ವ್ಯಕ್ತಪಡಿಸಿತು.

ಓಲ್ಡ್ ರಾಜಿಂದರ್‌ ನಗರದಲ್ಲಿರುವ ರಾವ್ಸ್‌ ಐಎಎಸ್ ಸ್ಟಡಿ ಸರ್ಕಲ್‌ ಕೋಚಿಂಗ್‌ ಸೆಂಟರ್‌ನಲ್ಲಿ ಈ ದುರಂತ ನಡೆದಿತ್ತು. ಉತ್ತರ ಪ್ರದೇಶದ ಶ್ರೇಯಾ ಯಾದವ್‌ (25), ತೆಲಂಗಾಣದ ತನ್ಯಾ ಸೋನಿ (25) ಹಾಗೂ ತೆಲಂಗಾಣದ ನೆವಿನ್ ಡೆಲ್ವಿನ್ (24) ಮೃತಪಟ್ಟಿದ್ದರು.

               ಪ್ರಕರಣದ ತನಿಖೆಯನ್ನು ದೆಹಲಿ ಹೈಕೋರ್ಟ್‌ ಈಗಾಗಲೇ ಸಿಬಿಐ ತನಿಖೆಗೆ ವರ್ಗಾಯಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries