HEALTH TIPS

ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರ ಮತ್ತು ಶಿಸ್ತು ರೂಢಿಸಿಕೊಳ್ಳಬೇಕು : ನೀರಾಳ ಕೃಷ್ಣ ಹೊಳ್ಳ

 

         

             ಮಧೂರು: ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರ ಮತ್ತು ಶಿಸ್ತು ರೂಢಿಸಿಕೊಳ್ಳಬೇಕು ಎಂಬುದಾಗಿ ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಸ್ಥಾನದ ಆಡಳಿತ ಮಂಡಳಿ ಮಾಜಿ ಸದಸ್ಯ ನೀರಾಳ ಕೃಷ್ಣ ಹೊಳ್ಳ ಅವರು ಅಭಿಪ್ರಾಯಪಟ್ಟರು. ಉತ್ತಮ ಸಂಸ್ಕಾರವಿದ್ದರೆ ಅದೇ ಬಲದಿಂದ ಇತರರಿಗೆ ನೆರವಾಗುವ, ಸಮಾಜಕ್ಕೆ ಒಳಿತಾಗುವ ಕಾರ್ಯಮಾಡಲು ಸಾಧ್ಯ ಎಂದು ಅವರು ಹೇಳಿದರು. 

                 ಕೂಟ ಮಹಾ ಜಗತ್ತು ಸಾಲಿಗ್ರಾಮ ಇದರ ಕಾಸರಗೋಡು ಅಂಗ ಸಂಸ್ಥೆಯ ವತಿಯಿಂದ ಕಳೆದ ಸಾಲಿನ ಎಸ್.ಎಸ್.ಎಲ್.ಸಿ. ಹಾಗೂ ಹೈಯರ್ ಸೆಕೆಂಡರಿ ಪರೀಕ್ಷೆಗಳಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಸ್ಮರಣಿಕೆಯನ್ನು ನೀಡಿ ಗೌರವಿಸಿ ಅವರು ಮಾತನಾಡಿದರು.

                ಇಲ್ಲಿನ ಮಾಯಿಪ್ಪಾಡಿಯ ಮಜಲು ಮನೆ ಲಕ್ಷ್ಮಿ ತುಂಗ ಅವರ ಮನೆಯಲ್ಲಿ ನಡೆದ ಸಂಪರ್ಕ ಸಭೆಯ ಅಧ್ಯಕ್ಷತೆಯನ್ನು ಅಂಗಸAಸ್ಥೆಯ ಅಧ್ಯಕ್ಷ ಶಂಕರನಾರಾಯಣ ಮಯ್ಯ ಬದಿಯಡ್ಕ ಅವರು ವಹಿಸಿದ್ದರು. ಈ ಸಂದರ್ಭದಲ್ಲಿ ತುಂಗ ರವಿಶಂಕರ ಭಟ್, ಹಿರಿಯ ಕೂಟ ಬಂಧುಗಳಾದ ಎ.ವಾಸುದೇವ ಹೊಳ್ಳ ಎಲ್ಲಂಗಳ, ಎಂ.ನರಸಿAಹ ರಾಜ್ ಪುತ್ತಿಗೆ, ಶಂಕರ ನಾವಡ ವರ್ಕಾಡಿ ಅಂಗಸAಸ್ಥೆಯ ಕಾರ್ಯದರ್ಶಿ ನರಸಿಂಹ ಮಯ್ಯ ಎಂ. ಮಧೂರು ಮುಂತಾದವರು ಉಪಸ್ಥಿತರಿದ್ದರು. ಎಸ್.ಎಸ್.ಎಲ್.ಸಿ. ಹಾಗೂ ಹೈಯರ್ ಸೆಕೆಂಡರಿ ಪರೀಕ್ಷೆಗಳಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ಶ್ರೀಕೃಷ್ಣ ಹಂದೆ ಎಡನೀರು, ಸಿಂಚನಾ ಹೊಳ್ಳ ಎಲ್ಲಂಗಳ, ಸ್ಮಿತಾ ಎ.ಎಲ್ಲಂಗಳ ಅವರನ್ನು ಅಭಿನಂದಿಸಲಾಯಿತು. ಪುರಸ್ಕೃತರು ಕೃತಜ್ಞತೆ ಸಲ್ಲಿಸಿ ಮಾತನಾಡಿದರು. ಗೋಪಾಲಕೃಷ್ಣ ತುಂಗ ಸ್ವಾಗತಿಸಿ, ಕೃಷ್ಣ ಕಾರಂತ ಬನ್ನೂರು ವಂದಿಸಿದರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries