HEALTH TIPS

ಸಾರ್ವಜನಿಕ ಸ್ಮಶಾನಗಳಲ್ಲಿ ಗುರುತು ಪತ್ತೆಯಾಗದ ಮೃತದೇಹಗಳ ಅಂತ್ಯಕ್ರಿಯೆ

Top Post Ad

Click to join Samarasasudhi Official Whatsapp Group

Qries

            ಯನಾಡ್: ಕೇರಳದ ವಯನಾಡ್‌ನಲ್ಲಿ ಭೂಕುಸಿತದಲ್ಲಿ ಮೃತಪಟ್ಟು, ಗುರುತು ಪತ್ತೆಯಾಗದ ದೇಹಗಳನ್ನು ಸಾರ್ವಜನಿಕ ಸ್ಮಶಾನಗಳಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

           ಕಲ್ಪೆಟ್ಟ, ವೈತಿರಿ, ಮುಟ್ಟಿಲ್‌, ಕನಿಯಾಂಬಟ್ಟ, ಪಡಿಞಾರತ್ತರ, ತೊಂಡರ್ನಾಡ್‌, ಎಡವಗ ಹಾಗೂ ಮುಲ್ಲನ್‌ಕೊಲ್ಲಿ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯ ಸ್ಮಶಾನಗಳಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

             ಮೇಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಗುರುತು ಪತ್ತೆಯಾಗದ 74 ಮೃತದೇಹಗಳನ್ನು ಇರಿಸಲಾಗಿದೆ. ಅಗತ್ಯ ಪ್ರಕ್ರಿಯೆಗಳು ಮುಗಿದ ಬಳಿಕ ದೇಹಗಳ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

           ನೋಂದಣಿ ಇಲಾಖೆಯ ಇನ್‌ಸ್ಪೆಕ್ಟರ್‌ ಜನರಲ್‌ ಶ್ರೀಧನ್ಯ ಸುರೇಶ್‌ ಅವರನ್ನು ಮೃತದೇಹಗಳ ನೋಂದಣಿ ಹಾಗೂ ಅಂತಿಮ ಸಂಸ್ಕಾರದ ಮೇಲುಸ್ತುವಾರಿ ನೋಡಿಕೊಳ್ಳಲು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.

                ಭೂಕುಸಿತ ಘಟನೆಯಲ್ಲಿ 200ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ.


Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries