ಪತ್ತನಂತಿಟ್ಟ: ಶಬರಿಮಲೆಯ ಭಸ್ಮಕೆರೆಯನ್ನು ಹೊಸ ಸ್ಥಳಕ್ಕೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ. ಅಸ್ತಿತ್ವದಲ್ಲಿರುವ ಕೆರೆಯ ಶುದ್ಧತೆ ಮತ್ತು ಪಾವಿತ್ರ್ಯದ ಬಗ್ಗೆ ಟೀಕೆಗಳು ಎದ್ದಿರುವ ಕಾರಣ ಈ ನಿರ್ಧಾರಕ್ಕೆ ಬರಲಾಗಿದೆ.
ಇಂದು ಬೆಳಗ್ಗೆ 7.30ಕ್ಕೆ ನೂತನ ಭಸ್ಮಕೆರೆಯ ರ್ಸಥಳಾಂತರ ನಡೆಯಿತು. ಮಧ್ಯಾಹ್ನ 12ರಿಂದ 12.30ರ ನಡುವೆ ನೂತನ ಭಸ್ಮಕೆರೆಗೆ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಲಿದೆ.