HEALTH TIPS

ಮಣಿಪುರ ಅಂತರರಾಷ್ಟ್ರೀಯ ಗಡಿಯಲ್ಲಿ ಭದ್ರತೆ ಪರಿಶೀಲಿಸಿದ ಸೇನಾ ಮುಖ್ಯಸ್ಥ ಉಪೇಂದ್ರ

        ಇಂಫಾಲ: ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿಯವರು ಮಣಿಪುರದ ಅಂತರರಾಷ್ಟ್ರೀಯ ಗಡಿಯಲ್ಲಿ ಭದ್ರತಾ ಪರಿಸ್ಥಿತಿಯನ್ನು ಅವಲೋಕನ ಮಾಡಿದರು. ಅವರು ಎರಡು ದಿನಗಳ ಮಣಿಪುರ ಪ್ರವಾಸದಲ್ಲಿದ್ದಾರೆ.

         'ಈಸ್ಟರ್ನ್ ಆರ್ಮಿ ಕಮಾಂಡರ್ ಜೊತೆಗೆ ಗಡಿಯಲ್ಲಿನ ಭದ್ರತಾ ಪರಿಸ್ಥಿತಿ ಮತ್ತು ಪ್ರದೇಶದ ಆಂತರಿಕ ಭದ್ರತಾ ಪರಿಸ್ಥಿತಿಯನ್ನು ಅವರು ಪರಿಶೀಲಿಸಿದರು' ಎಂದು ಪ್ರಕಟಣೆ ತಿಳಿಸಿದೆ.

           ಭಾರತೀಯ ಸೇನೆ ಮತ್ತು ಅಸ್ಸಾಂ ರೈಫಲ್ಸ್ ಒಟ್ಟಾಗಿ ಪ್ರದೇಶದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಮಾಡುತ್ತಿರುವ ಪ್ರಯತ್ನವನ್ನು ಶ್ಲಾಘಿಸಿದರು. ಹಿರಿಯ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದ ಅವರು, ರಾಷ್ಟ್ರ ನಿರ್ಮಾಣಕ್ಕೆ ಅವರ ಅಮೂಲ್ಯ ಕೊಡುಗೆಗಳನ್ನು ಶ್ಲಾಘಿಸಿದರು. ಸಮುದಾಯಗಳ ನಡುವೆ ಮತ್ತು ಶಾಂತಿ ಮತ್ತು ಸೌಹಾರ್ದವನ್ನು ಹರಡುವಲ್ಲಿ ಸೇನಾ ಪಡೆಯ ಪ್ರಯತ್ನ ಮುಂದುವರಿಯಲಿ ಎಂದರು.

              ಜನರಲ್ ದ್ವಿವೇದಿ ಅವರು ಶುಕ್ರವಾರ ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರೊಂದಿಗೆ ಮಾತುಕತೆ ಕೂಡ ನಡೆಸಿದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries