HEALTH TIPS

ಅದಾನಿ ಪ್ರಕರಣ: ಜೆಪಿಸಿ ತನಿಖೆಗೆ ಒತ್ತಾಯಿಸಿ ತೆಲಂಗಾಣ ಸಿಎಂ, ಸಚಿವರ ಧರಣಿ

           ಹೈದರಾಬಾದ್‌: ಸೆಬಿ ಮುಖ್ಯಸ್ಥೆ ಮಾಧವಿ ಬುಚ್‌ ಅವರ ರಾಜೀನಾಮೆ ಮತ್ತು ಅದಾನಿ ವಿವಾದದ ಕುರಿತು ಜಂಟಿ ಸಂಸದೀಯ ಸಮಿತಿ ತನಿಖೆಗೆ ಒತ್ತಾಯಿಸಿ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ, ಪಕ್ಷದ ಸಚಿವರು ಮತ್ತು ಶಾಸಕರು ಧರಣಿ ನಡೆಸಿದ್ದಾರೆ.

         'ಸತ್ಯ ಮೇಲುಗೈ ಸಾಧಿಸಲಿದೆ' ಎಂಬ ಘೋಷಣಾ ಫಲಕಗಳ‌ನ್ನು ಹಿಡಿದು ಗನ್‌ ಪಾರ್ಕ್‌ನಿಂದ ಜಾರಿ ನಿರ್ದೇಶನಾಲಯ (ಇ.ಡಿ) ಕಚೇರಿವರೆಗೆ ರ‍್ಯಾಲಿ ನಡೆಸಿದ ತೆಲಂಗಾಣ ಪ್ರದೇಶ ಕಾಂಗ್ರೆಸ್‌ ಸಮಿತಿ (ಟಿಪಿಸಿಸಿ) ಮುಖಂಡರು ಇ.ಡಿ ಕಚೇರಿ ಆವರಣದ ಎದುರು ಧರಣಿ ನಡೆಸಿದರು.

           'ಸೆಬಿ ಅಧ್ಯಕ್ಷರ ರಾಜೀನಾಮೆ ಮತ್ತು ಅದಾನಿಯ ಬಹುದೊಡ್ಡ ಹಗರಣದ ತನಿಖೆಗಾಗಿ ಜಂಟಿ ಸಂಸದೀಯ ಸಮಿತಿಯನ್ನು ರಚಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ' ಎಂದು ಕಾಂಗ್ರೆಸ್‌ ಮುಖಂಡರು ಹೇಳಿದರು.

              ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ಮಾಜಿ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್ ಸೇರಿದಂತೆ ಪಕ್ಷದ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

                ವಾಣಿಜ್ಯ ಕ್ಷೇತ್ರದಲ್ಲಿ ಸದ್ದು ಮಾಡಿರುವ ಅದಾನಿ ಷೇರು ಹಗರಣದಲ್ಲಿ ಮಾಧವಿ ಹಾಗೂ ಧವಲ್‌ ಭಾಗಿಯಾಗಿದ್ದಾರೆ. ಉದ್ಯಮಿ ಗೌತಮ್‌ ಅದಾನಿ ಸಮೂಹದ ಸಾಗರೋತ್ತರ ಹೂಡಿಕೆಯಲ್ಲಿ ಬುಚ್‌ ದಂಪತಿಯ ಪಾಲುದಾರಿಕೆ ಇದೆ ಎಂದು ಹಿಂಡೆನ್‌ಬರ್ಗ್‌ ಗಂಭೀರವಾದ ಆರೋಪ ಮಾಡಿದೆ. ಈ ಬೆನ್ನಲ್ಲೇ ಕಾಂಗ್ರೆಸ್‌, ಕೇಂದ್ರದ ಎನ್‌ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

                ಹಿಂಡೆನ್‌ಬರ್ಗ್‌ ಆರೋಪಗಳು ಆಧಾರರಹಿತವಾಗಿವೆ, ತಮ್ಮ ಹಣಕಾಸು ವ್ಯವಹಾರಗಳು ತೆರೆದ ಪುಸ್ತಕವಿದ್ದಂತೆ ಎಂದು ಬುಚ್‌ ದಂಪತಿ ಪ್ರತಿಪಾದಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries