HEALTH TIPS

ಅಕ್ರಮ ಒತ್ತುವರಿ, ಗಣಿಗಾರಿಕೆಯೇ ವಯನಾಡು ದುರಂತಕ್ಕೆ ಕಾರಣ: ಸಚಿವ ಭೂಪೇಂದ್ರ ಯಾದವ್

 ವದೆಹಲಿ: 'ಕೇರಳ ಸರ್ಕಾರವು ಸೂಕ್ಷ್ಮ ಪ್ರದೇಶಗಳಲ್ಲಿ ಮಾನವ ವಾಸಸ್ಥಾನದ ಅಕ್ರಮ ವಿಸ್ತರಣ ಮತ್ತು ಗಣಿಗಾರಿಕೆಗೆ ಅವಕಾಶ ನೀಡಿರುವುದೇ ಭೂಕುಸಿತಕ್ಕೆ ಕಾರಣ' ಎಂದು ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಅವರು ಸೋಮವಾರ ಹೇಳಿದರು.

ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶಗಳ ಕುರಿತ ಅಂತಿಮ ಅಧಿಸೂಚನೆ ಬಗ್ಗೆ ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದ್ದು, ಶೀಘ್ರವೇ ಅಂತಿಮ ವರದಿ ಹೊರಬೀಳಲಿದೆ ಎಂದು ತಿಳಿಸಿದರು.

'ಪಶ್ಚಿಮ ಘಟ್ಟಗಳು ದೇಶದ ಅತಿ ಸೂಕ್ಷ್ಮ ಪ್ರದೇಶಗಳು. ಇಂಥ ಪ್ರದೇಶಗಳಲ್ಲಿ ದುರಂತಗಳು ಘಟಿಸುವುದನ್ನು ತಡೆಯಲು ಗಂಭೀರ ಪ್ರಯತ್ನ ಮಾಡಬೇಕಿದೆ. ಈ ನಿಟ್ಟಿನಲ್ಲಿ ಕೇರಳ ಸರ್ಕಾರದ ಜವಾಬ್ದಾರಿ ಸಹ ಹೆಚ್ಚಿದೆ' ಎಂದು ಹೇಳಿದರು.


ಪರಿಸರ ಸಚಿವಾಲಯವು ಪಶ್ಚಿಮ ಘಟ್ಟಗಳ 56,800 ಚದರ ಕಿಲೋಮೀಟರ್‌ ಪ್ರದೇಶವನ್ನು ಸೂಕ್ಷ್ಮ ಪ್ರದೇಶಗಳು ಎಂದು 2014ರಿಂದ ಈವರೆಗೆ ಆರು ಬಾರಿ ಕರಡು ಅಧಿಸೂಚನೆ ಹೊರಡಿಸಿದೆ. ರಾಜ್ಯಗಳಿಂದ ಆಕ್ಷೇಪ ವ್ಯಕ್ತವಾಗಿರುವ ಕಾರಣ ಅಂತಿಮ ಅಧಿಸೂಚನೆ ಬಾಕಿ ಉಳಿದಿದೆ.

 ಶಶಿ ತರೂರ್

ಅಕ್ರಮವನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ: ತರೂರ್‌

ನವದೆಹಲಿ: ವಯನಾಡ್‌ ದುರಂತಕ್ಕೆ ಅಕ್ರಮ ಒತ್ತುವರಿ ಕಾರಣವಾಗಿದ್ದರೆ ಕಠಿಣ ಕ್ರಮ ಕೈಗೊಳ್ಳಬೇಕು. ಆದರೆ ಸದ್ಯ ಸಂತ್ರಸ್ತರು ದೈಹಿಕವಾಗಿ ಮಾನಸಿಕವಾಗಿ ಕುಗ್ಗಿದ್ದು ಅವರತ್ತ ಹೆಚ್ಚು ಗಮನ ನೀಡಬೇಕಾದ ಅಗತ್ಯವಿದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಶಶಿ ತರೂರ್‌ ಸೋಮವಾರ ಹೇಳಿದರು. ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್‌ ಅವರು ಕೇರಳ ಸರ್ಕಾರವು ಸೂಕ್ಷ್ಮ ಪ್ರದೇಶದಲ್ಲಿ ಮಾನವ ವಾಸಸ್ಥಾನದ ಅಕ್ರಮ ವಿಸ್ತರಣೆ ಮತ್ತು ಗಣಿಗಾರಿಕೆಗೆ ಅವಕಾಶ ನೀಡಿರುವುದೇ ಭೂಕುಸಿತಕ್ಕೆ ಕಾರಣ ಎಂದು ಹೇಳಿದ್ದಕ್ಕೆ ಹೀಗೆ ಪ್ರತಿಕ್ರಿಯೆ ನೀಡಿದರು. 'ಅಕ್ರಮ ನಡೆದಿದ್ದರೆ ಕ್ಷಮಿಸುವ ಪ್ರಶ್ನೆಯೇ ಇಲ್ಲ. ಅಕ್ರಮವನ್ನು ಯಾರೂ ಸ್ವಾಗತಿಸುವುದೂ ಇಲ್ಲ. ಸಮಿತಿಯು ವೃತ್ತಿಪರವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಭಾವಿಸುತ್ತೇನೆ' ಎಂದು ಹೇಳಿದರು. 'ಸದ್ಯದ ಪರಿಸ್ಥಿತಿಯಲ್ಲಿ ಭೂಕುಸಿತದಿಂದಾಗಿ ಎಲ್ಲವನ್ನೂ ಕಳೆದುಕೊಂಡಿರುವ ಜನರತ್ತ ಗಮನ ನೀಡಿ ಅವರನ್ನು ಸಂತೈಸುವುದು ನಮ್ಮ ಆದ್ಯತೆಯಾಗಬೇಕು' ಎಂದು ಹೇಳಿದರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries