ಕುಂಬಳೆ: ಮುಜುಂಗಾವು ಶ್ರೀ ಭಾರತಿ ವಿದ್ಯಾಪೀಠದಲ್ಲಿ ರಕ್ಷಾ ಬಂಧನ ಆಚರಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ಆಡಳಿತ ಸಮಿತಿಯ ಕಾರ್ಯದರ್ಶಿ ಶ್ಯಾಮರಾಜ ದೊಡ್ಡಮಾಣಿ ಸಹೋದರ ಸಹೋದರಿಯರ ನಡುವಿನ ಭಾಂದವ್ಯದ ಕುರಿತು ಮಾತನಾಡಿ ವಿದ್ಯಾರ್ಥಿಗಳು ಹೇಗಿರಬೇಕೆಂದು ತಮ್ಮ ಮಾತುಗಳಲ್ಲಿ ತಿಳಿ ಹೇಳಿದರು. ಪರಸ್ಪರ ರಾಖಿ ಕಟ್ಟಿ ಸಿಹಿ ಸವಿದು ರಕ್ಷಾಬಂಧನ ದಿನವನ್ನು ಆಚರಿಸಿದರು.
ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಬಾಲಸುಬ್ರಹ್ಮಣ್ಯ ಭಟ್ ಚೆಕ್ಕಣಿಕೆ, ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ್ ಭಟ್ ದರ್ಭೆರ್ಮಾರ್ಗ , ಸಹ ಮುಖ್ಯ ಶಿಕ್ಷಕಿ ಚಿತ್ರಾ ಸರಸ್ವತಿ ಹಾಗೂ ಅಧ್ಯಾಪಕವೃಂದ ಉಪಸ್ಥಿತರಿದ್ದರು. ಸೌಮ್ಯ ಕಾರ್ಯಕ್ರಮ ನಿರ್ವಹಿಸಿದರು.