HEALTH TIPS

ಹೈದರಾಬಾದ್‌ನಲ್ಲಿ ಭಾರಿ ಮಳೆ; ನೀರಿನಲ್ಲಿ ಕೊಚ್ಚಿಹೋದ ವ್ಯಕ್ತಿ

        ಹೈದರಾಬಾದ್: ಹೈದರಾಬಾದ್‌ ನಗರ ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸುರಿದ ಪರಿಣಾಮ ಸುತ್ತಮುತ್ತಲಿನ ಪ್ರದೇಶಗಳು ಜಲಾವೃತವಾಗಿದ್ದು, ವ್ಯಕ್ತಿಯೊಬ್ಬರು ನೀರಿನಲ್ಲಿ ಕೊಚ್ಚಿಹೋಗಿದ್ದಾರೆ ಎಂದು ವರದಿಯಾಗಿದೆ.

            ತೆಲಂಗಾಣದ ಜಿಲ್ಲೆಗಳಾದ ವನಪರ್ತಿ, ಹನುಮಕೊಂಡ, ಮಹಬೂಬ್‌ನಗರ, ನಾಗರಕರ್ನೂಲ್, ನಲಗೊಂಡ, ನಿಜಾಮಾಬಾದ್, ರಂಗಾರೆಡ್ಡಿ, ಸಿದ್ದಿಪೇಟೆ ಜಿಲ್ಲೆಗಳಲ್ಲಿ ಇಂದು (ಮಂಗಳವಾರ) ಭಾರಿ ಮಳೆಯಾಗಿದೆ.

             ಯಾದಾದ್ರಿ ಭುವನಗಿರಿಯಲ್ಲಿ 17 ಸೆಂ.ಮೀ, ಜೋಗುಲಾಂಬ ಗದ್ವಾಲ್, ನಾರಾಯಣಪೇಟೆಯ ಮದ್ದೂರ್‌ನಲ್ಲಿ 14 ಸೆಂ.ಮೀ ಮಳೆಯಾಗಿದೆ ಎಂದು ವರದಿಯಾಗಿದೆ.

             ರಾಜ್ಯದ ಆದಿಲಾಬಾದ್, ಕೊಮಾರಂ ಭೀಮ್ ಆಸಿಫಾಬಾದ್, ಮಂಚೇರಿಯಲ್, ನಿರ್ಮಲ್, ವಿಕಾರಾಬಾದ್, ಸಂಗಾರೆಡ್ಡಿ, ಮೇದಕ್, ಕಾಮರೆಡ್ಡಿ, ಮಹಬೂಬ್‌ನಗರ, ನಾಗರ್‌ಕರ್ನೂಲ್, ವನಪರ್ತಿ, ನಾರಾಯಣಪೇಟ್, ಜೋಗುಲಾಂಬ ಗದ್ವಾಲ್ ಜಿಲ್ಲೆಗಳಲ್ಲಿ ನಾಳೆಯವರೆಗೂ (ಬುಧವಾರ) ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (ಎಎಂಡಿ) ತಿಳಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries