HEALTH TIPS

ವಿಶ್ವ ಸ್ತನ್ಯಪಾನ ವಾರಾಚರಣೆ-ಜಿಲ್ಲಾ ಮಟ್ಟದ ವಿಚಾರ ಸಂಕಿರಣ ಉದ್ಘಾಟನೆ


          ಕಾಸರಗೋಡು: ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲಾ ಮಟ್ಟದ ಐಸಿಡಿಎಸ್ ಸೆಲ್ ವಿಚಾರ ಸಂಕಿರಣವನ್ನು ಆಯೋಜಿಸಿತ್ತು. ಡಿಪಿಸಿ ಸಭಾಂಗಣದಲ್ಲಿ ನಡೆದ ವಿಚಾರ ಸಂಕಿರಣ ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್  ಉದ್ಘಾಟಿಸಿದರು. 

            ಈ ಸಂದರ್ಭ ಮಾತನಾಡಿದ ಅವರು, ಪ್ರತಿ ಮಗುವಿಗೆ ಹುಟ್ಟಿದ ಆರು ತಿಂಗಳವರೆಗೆ ಎದೆಹಾಲು ಮಾತ್ರ ನೀಡಬೇಕು. ಎರಡು ವರ್ಷದವರೆಗೆ ಇತರೆ ಆಹಾರ ಪದಾರ್ಥಗಳೊಂದಿಗೆ ಎದೆಹಾಲು ನೀಡಬೇಕು.  ಆರೋಗ್ಯವಂತ ನಾಗರಿಕರನ್ನು ರೂಪಿಸುವಲ್ಲಿ ಹಾಲುಣಿಸುವ ತಾಯಂದಿರ ಪಾತ್ರ ಮಹತ್ತರವಾಗಿದ್ದು, ತಾಯಿ ಹಾಗೂ ಮಗುವಿನ ಆರೋಗ್ಯದಲ್ಲಿ ಸ್ತನ್ಯಪಾನ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.  ಕಾಸರಗೋಡು ಜಿಲ್ಲಾ ಪಂಚಾಯಿತಿ ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ವಕೀಲೆ ಎಸ್.ಎನ್ ಸರಿತಾ ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಜನರಲ್ ಆಸ್ಪತ್ರೆಯ ಮಕ್ಕಳ ತಜ್ಞ ಡಾ.ಬಿ.ನಾರಾಯಣ ನಾಯ್ಕ್ ಹಾಗೂ ವೆಳ್ಳರಿಕುಂಡ್ ತಾಲೂಕು ಆಸ್ಪತ್ರೆ ಡಯಟಿಷಿಯನ್ ಮೃದುಲಾ ಅರವಿಂದ್ ತರಗತಿ ನಡೆಸಿದರು.  ಜಿಲ್ಲಾ ಸಾಮಾಜಿಕ ನ್ಯಾಯ ಅಧಿಕಾರಿ ಆರ್ಯ ಪಿ ರಾಜ್, ಸಿಡಿಪಿಒಗಳು, ಅಂಗನವಾಡಿ ಕಾರ್ಯಕರ್ತೆಯರು, ಹಾಲುಣಿಸುವ ತಾಯಂದಿರು, ಗರ್ಭಿಣಿಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಉಪಸ್ಥಿತರಿದ್ದರು.  ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ವಿ.ಎಸ್.ಶಿಮ್ನಾ ಸ್ವಾಗತಿಸಿದರು.  ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶೈನಿ ಐಸಾಕ್ ವಂದಿಸಿದರು.


  


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries