HEALTH TIPS

ಪೊಲೀಸ್ ಕಾರ್ಯಾಚರಣೆ-ಎಂಡಿಎಂಎ, ಗಾಂಜಾ ವಶ: ಮೂವರ ಬಂಧನ

         ಮಂಜೇಶ್ವರ :ಮಂಜೇಶ್ವರ ಹಾಗೂ ಬದಿಯಡ್ಕ ಠಾಣೆ ಪೊಲೀಸರು ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಗಾಂಜಾ, ಎಂಡಿಎಂಎ ಸೇರಿದಂತೆ ಮಾದಕ ದ್ರವ್ಯ ಸಾಗಿಸುತ್ತಿದ್ದ ಮೂವರನ್ನು ಬಂಧಿಸಿದ್ದಾರೆ. ಮಂಜೇಶ್ವರ ಠಾಣೆ ಪೊಲೀಸರು ಶುಕ್ರವಾರ ತಡರಾತ್ರಿ ಮೊರತ್ತಣೆಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಸ್ಕೂಟರಲ್ಲಿ ಸಾಗಿಸುತ್ತಿದ್ದ 97ಗ್ರಾಂ ಎಂಡಿಎಂಎ ವಶಪಡಿಸಿಕೊಂಡು ಹೊಸಂಗಡಿ ನಿವಾಸಿಮಹಮ್ಮದ್ ಅಲ್ತಾಫ್ ಎಂಬಾತನನ್ನು ಬಂಧಿಸಿದ್ದಾರೆ.

         ಬದಿಯಡ್ಕ ಠಾಣೆ ಪೊಲೀಸರು ಬೇಳ ಪೆರಿಯಡ್ಕದ ಮನೆಯೊಂದಕ್ಕೆ ದಾಳಿ ನಡೆಸಿ 1.92ಗ್ರಾಂ ಎಂಡಿಎಂಎ, 41.30ಗ್ರಾಂ ಗಾಂಜಾ ಹಾಗೂ 13500ರೂ. ನಗದು ವಶಪಡಿಸಿಕೊಂಡಿದ್ದಾರೆ. 

          ಪ್ರಕರಣಕ್ಕೆ ಸಂಬಂಧಿಸಿ ಪೆರಿಯಡ್ಕ ಕುಂಜಾರು ನಿವಾಸಿ ಇಬ್ರಾಹಿಂ ಇಸ್ಪಾಕ್ ಕೆ.ಎ ಹಾಗೂ ಬೇಳ ಮೆಣಸಿನಪಾರೆ ನಿವಾಸಿ ಮಹಮ್ಮದ್ ರಫೀಕ್ ಎಂಬವರನ್ನು ಬಂಧಿಸಿದ್ದಾರೆ. ರಾತ್ರಿ ಪೆಟ್ರೋಲಿಂಗ್ ನಡೆಸುತ್ತಿದ್ದ ಪೊಲೀಸರಿಗೆ, ಮನೆಯನ್ನು ಕೇಂದ್ರೀಕರಿಸಿ ಮಾದಕದ್ರವ್ಯ ಮಾರಾಟ ನಡೆಸುತ್ತಿರುವ ಬಗ್ಗೆ ಲಭಿಸಿದ ಮಾಹಿತಿಯನ್ವಯ ಕಾರ್ಯಾಚರಣೆ ನಡೆಸಿದ್ದಾರೆ. ಡಿವೈಎಸ್ಪಿ ಸಿ.ಕೆ ಸುನಿಲ್‍ಕುಮಾರ್ ನಿರ್ದೇಶದನ್ವಯ ಕಾರ್ಯಾಚರಣೆ ನಡೆಸಲಾಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries