HEALTH TIPS

ವಾಮಂಜೂರು ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

             ಮಂಜೇಶ್ವರ: ವಾಮಂಜೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಭಾರತೀಯ ಭೂಸೈನ್ಯದಲ್ಲಿ ಇಪ್ಪತ್ತು ವರ್ಷ ಸೇವೆಗೈದು ನಿವೃತ್ತರಾದ ಜ್ಯೂನಿಯರ್ ಕಮೀಶನರ್ ಅಧಿಕಾರಿ ಮೋಹನ್ ಕಡಂಬಾರು ಧ್ವಜಾರೋಹಣಗೈದು, ಸ್ವಾತಂತ್ರ್ಯ ದಿನ ಸಂದೇಶ ನೀಡಿದರು. 

            ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮೋಹನ್ ಕಡಂಬಾರು ಅವರನ್ನು ಗೌರವಾಧಾರಗಳಿಂದ ಸನ್ಮಾನಿಸಲಾಯಿತು. ಶಿಕ್ಷಕಿ ಶೋಭಾ ಸನ್ಮಾನಿತರ ಕಿರುಪರಿಚಯ ನೀಡಿದರು. ಮಂಜೇಶ್ವರ ಪಂಚಾಯಿತಿ ಸದಸ್ಯ ಆದರ್ಶ್ ಬಿ.ಎಂ. ಉದ್ಘಾಟಿಸಿ, ಶಾಲಾ ಲಾಂಛನವನ್ನು ಬಿಡುಗಡೆಗೊಳಿಸಿದರು. ಮಂಗಳೂರು ರಥಬೀದಿಯ ಸತೀಶ ದಯಾನಂದ ಪೈ ಸರ್ಕಾರಿ ಪ್ರಥಮದರ್ಜೆ ಕಾಲೇಜು ಪ್ರಾಧ್ಯಾಪಕ ಜೆಪ್ರಿ ರೋಡ್ರಿಗಸ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಶಾಸ್ತಾ ಕ್ಲಬ್ ಅಧ್ಯಕ್ಷ ಶೇಷಪ್ಪ ಸಾಲ್ಯಾನ್, ಹಿರಿಯ ಶಿಕ್ಷಕಿ ಸುಬೈದ ಸಿ. ಮಾತನಾಡಿದರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಕಲಂದರ್ ತಾಜುದ್ದೀನ್ ಅಧ್ಯಕ್ಷತೆ ವಹಿಸಿದ್ದರು. ಬ್ರದರ್ಸ್ ಕ್ಲಬ್, ನಿತ್ಯಾನಂದ ಕ್ಲಬ್, ಶಾಸ್ತಾ ಕ್ಲಬ್, ಯಂಗ್ ಫ್ರೆಂಡ್ಸ್ ಕ್ಲಬ್‍ನ ಸದಸ್ಯರು ಉಪಸ್ಥಿತರಿದ್ದರು. ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ರಶ್ಮಿತಾ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಘವನ್, ಉಪಾಧ್ಯಕ್ಷ ಅನಿಲ್ ಕುಮಾರ್, ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಸಿಲ್ವಿಯಾ ಸ್ವಾಗತಿಸಿ, ಶಿಕ್ಷಕಿ ಬೀಫಾತಿಮಾ ವಂದಿಸಿದರು. ಶಿಕ್ಷಕಿ ಮಮತಾ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವಿತರಿಸಲಾಯಿತು. ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರಗಿದವು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries