ತಿರುವನಂತಪುರ: ವಯನಾಡ್ ಭೂಕುಸಿತ ದುರಂತದ ಕುರಿತು ವೈಜ್ಞಾನಿಕ ಮತ್ತು ತಾಂತ್ರಿಕ ತಜ್ಞರು ವಿಪತ್ತು ಪ್ರದೇಶಕ್ಕೆ ಭೇಟಿ ನೀಡಿ ಪ್ರತಿಕ್ರಿಯೆ ನೀಡುವುದನ್ನು ನಿಷೇಧಿಸಿರುವ ಆದೇಶವನ್ನು ಹಿಂಪಡೆಯುವAತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೂಚಿಸಿದ್ದಾರೆ.
ಸರ್ಕಾರಕ್ಕೆ ಅಂತಹ ನೀತಿ ಇಲ್ಲ, ತಪ್ಪು ತಿಳುವಳಿಕೆ ಮೂಡಿಸುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು. ಇಂತಹ ಆದೇಶವನ್ನು ಹಿಂಪಡೆಯಲು ಮಧ್ಯಪ್ರವೇಶಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿರುವುದಾಗಿ ಫೇಸ್ ಬುಕ್ ಪೋಸ್ಟ್ ನಲ್ಲಿ ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ.
ವಯನಾಡಿನ ಚುರಲ್ಮಲಾ-ಮುಂಡಕೈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡದಂತೆ ಮತ್ತು ಮಾಧ್ಯಮಗಳಿಗೆ ಈ ಬಗ್ಗೆ ಪ್ರತಿಕ್ರಿಯಿಸದಂತೆ ವಿಜ್ಞಾನಿಗಳಿಗೆ ಸೂಚಿಸಲಾಗಿದೆ. ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿ ಟಿಂಕು ಬಿಸ್ವಾಲ್ ಅವರು ಹಿಂದಿನ ಅಧ್ಯಯನಗಳ ಮಾಹಿತಿಯನ್ನು ಮಾಧ್ಯಮಗಳೊಂದಿಗೆ ಹಂಚಿಕೊಳ್ಳಬಾರದು ಎಂದು ಪ್ರತ್ಯೇಕ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.
ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಪ್ರಧಾನ ಕಾರ್ಯದರ್ಶಿ ಪ್ರೊ. ಕೆ.ಪಿ.ಸುಧೀರ್ ಅವರಿಗೆ ಕಳುಹಿಸಿರುವ ಆದೇಶದಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ವಿಪತ್ತು ಪೀಡಿತ ಪ್ರದೇಶದಲ್ಲಿ ಅಧ್ಯಯನ ನಡೆಸಬೇಕಾದರೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪೂರ್ವಾನುಮತಿ ಪಡೆಯಬೇಕು ಎಂದೂ ಆದೇಶದಲ್ಲಿ ತಿಳಿಸಲಾಗಿದೆ. ಈ ಆದೇಶ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಮುಖ್ಯಮಂತ್ರಿಗಳ ಮಧ್ಯಪ್ರವೇಶಿಸಿ ಹಿಂತೆಗೆಯಲು ಸೂಚಿಸಿದರು.
ಮುಖ್ಯಮಂತ್ರಿ ಸೂಚನೆ:
ವಯನಾಡಿನ ಮೆಪ್ಪಾಡಿ ಪಂಚಾಯತ್ ಅನ್ನು ವಿಪತ್ತು ಪ್ರದೇಶವೆಂದು ಘೋಷಿಸಿರುವುದರಿಂದ ಅಲ್ಲಿಗೆ ಭೇಟಿ ನೀಡಿ ಪ್ರತಿಕ್ರಿಯೆ ನೀಡದಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ವೈಜ್ಞಾನಿಕ ಮತ್ತು ತಾಂತ್ರಿಕ ಸಂಸ್ಥೆಗಳು ಮತ್ತು ವಿಜ್ಞಾನಿಗಳಿಗೆ ಸೂಚನೆ ನೀಡಿದೆ ಎಂಬ ಸುದ್ದಿ ತಪ್ಪುದಾರಿಗೆಳೆಯುವಂತಿದೆ. ರಾಜ್ಯ ಸರಕಾರಕ್ಕೆ ಅಂತಹ ನೀತಿ ಹೊಂದಿಲ್ಲ. ಈ ರೀತಿ ಸಂವಹನ ನಡೆಸಿದ ಸಂಬAಧಪಟ್ಟ ಅಧಿಕಾರಿಗಳನ್ನು ಹಿಂಪಡೆಯಲು ಕೂಡಲೇ ಮಧ್ಯಪ್ರವೇಶಿಸುವಂತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದರು.