HEALTH TIPS

BMW ಹಿಟ್ ಆಯಂಡ್ ರನ್ ಪ್ರಕರಣ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ ಮಿಹಿರ್ ಶಾ

 ಮುಂಬೈ: ಬಿಎಂಡಬ್ಲ್ಯು ಹಿಟ್ ಆಯಂಡ್ ರನ್ ಪ್ರಕರಣದ ಪ್ರಮುಖ ಆರೋಪಿ ಮಿಹಿರ್ ಶಾ ಅವರು ತಮ್ಮನ್ನು ಅಕ್ರಮವಾಗಿ ಬಂಧನದಲ್ಲಿ ಇರಿಸಲಾಗಿದೆ, ತಮ್ಮನ್ನು ತಕ್ಷಣವೇ ಬಂಧಮುಕ್ತಗೊಳಿಸಬೇಕು ಎಂದು ಕೋರಿ ಬಾಂಬೆ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ.

ಶಾ ಅವರು ಬಿಎಂಡಬ್ಲ್ಯು ಕಾರನ್ನು ಮುಂಬೈನ ವರ್ಲಿ ಪ್ರದೇಶದಲ್ಲಿ ದ್ವಿಚಕ್ರ ವಾಹನವೊಂದಕ್ಕೆ ಡಿಕ್ಕಿ ಹೊಡೆದು, ಅದರಲ್ಲಿ ಸಾಗುತ್ತಿದ್ದ ಕಾವೇರಿ ನಖ್ವಾ ಎನ್ನುವವರ ಸಾವಿಗೆ ಕಾರಣರಾದ ಆರೋಪ ಎದುರಿಸುತ್ತಿದ್ದಾರೆ.

ಈ ಅಪಘಾತ ಸಂಭವಿಸಿದ ಎರಡು ದಿನಗಳ ನಂತರ ಶಾ ಅವರನ್ನು ಬಂಧಿಸಲಾಗಿದೆ.

ತಮ್ಮನ್ನು ಬಂಧನದಲ್ಲಿ ಇರಿಸಿರುವುದು ಅಕ್ರಮ ಎಂದು ಶಾ ಅವರು ಅರ್ಜಿಯಲ್ಲಿ ಹೇಳಿದ್ದಾರೆ. ಈ ಅರ್ಜಿಯು ಹೈಕೋರ್ಟ್‌ನ ವಿಭಾಗೀಯ ಪೀಠವೊಂದರ ಎದುರು ಬುಧವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ. ಅಪಘಾತ ಸಂಭವಿಸಿದಾಗ ಶಾ ಅವರು ಪಾನಮತ್ತರಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries