HEALTH TIPS

ಮೃತದೇಹಗಳ ಗುರುತು ಪತ್ತೆಗೆ ಸಂಬಂಧಿಕರ DNA ಪರೀಕ್ಷೆ

           ಯನಾಡ್‌: ವಯನಾಡ್‌ನ ಮುಂಡಕ್ಕೈ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಕಣ್ಮರೆಯಾದವರ ಪತ್ತೆಗೆ, ಜಿಲ್ಲಾಡಳಿತವು ಬದುಕಿಳಿದವರ ಡಿಎನ್‌ಎ ಪರೀಕ್ಷೆಗಾಗಿ ರಕ್ತದ ಮಾದರಿಯನ್ನು ಸಂಗ್ರಹಿಸುತ್ತಿದೆ.

          ಆರೋಗ್ಯ ಇಲಾಖೆಯು ಈ ಕೆಲಸ ಮಾಡುತ್ತಿದೆ. ಇದೇ ವೇಳೆ ನಾಗರಿಕ ಸರಬರಾಜು ಇಲಾಖೆಯು ಪಡಿತರ ಚೀಟಿಯ ಮಾಹಿತಿ, ಆಧಾರ್‌ ಕಾರ್ಡ್ ಸಂಖ್ಯೆ ಹಾಗೂ ಅದಕ್ಕೆ ಜೋಡಿಸಲಾದ ಮೊಬೈಲ್‌ ಸಂಖ್ಯೆಗಳನ್ನು ಸಂಗ್ರಹಿಸುತ್ತಿದೆ.

           ರಕ್ಷಣಾ ಕಾರ್ಯಾಚರಣೆ ವೇಳೆ ಲಭಿಸಿರುವ ದೇಹದ ಭಾಗಗಳ ಗುರುತು ಪತ್ತೆ ಮಾಡಲು ಡಿಎನ್‌ಎ ಪರೀಕ್ಷೆಗಾಗಿ ಸಂಬಂಧಿಗಳ ರಕ್ತದ ಮಾದರಿಗಳನ್ನು ಸಂಗ್ರಹಿಸಲಾಗುತ್ತಿದೆ. ಮೊದಲ ಹಂತದಲ್ಲಿ ಗುರುತು ಪತ್ತೆಯಾಗದ ದೇಹಗಳ ರಕ್ತದ ಮಾದರಿಗಳನ್ನು ತೆಗೆದುಕೊಳ್ಳಲಾಗಿದೆ. ಇವೆರಡನ್ನೂ ತಾಳೆ ಮಾಡಲಾಗುತ್ತದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

                ಆಪ್ತ ಸಮಾಲೋಚನೆ ಮಾಡಿದ ಬಳಿಕ ಬದುಳಿಕದವರ ಹಾಗೂ ಸಂಬಂಧಿಕರಿಂದ ಡಿಎನ್‌ಎ ಪರೀಕ್ಷೆಗಾಗಿ ಮಾದರಿಯನ್ನು ಸಂಗ್ರಹಿಸಲಾಗಿದೆ. ಕಾಣೆಯಾದವರ ಪತ್ತೆಗೆ ನಾಗರಿಕ ಸರಬರಾಜು ಇಲಾಖೆಯು ಗ್ರಾಮ ಪಂಚಾಯತ್‌ಗೆ ಮಾಹಿತಿ ಒದಗಿಸಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ರಾಜ್ಯ ಕಂದಾಯ ಸಚಿವ ಕೆ. ರಾಜನ್ ನೀಡಿದ ಮಾಹಿತಿ ಪ್ರಕಾರ ಈವರೆಗೂ 221 ಮೃತದೇಹಗಳು, 166 ದೇಹದ ಭಾಗಗಳು ಪತ್ತೆಯಾಗಿವೆ. ವಯನಾಡ್‌, ಮಲಪ್ಪುರಂ ಹಾಗೂ ಕೋಯಿಕ್ಕೋಡ್‌ ಜಿಲ್ಲೆಗಳಲ್ಲಿ ಹರಿಯುವ ಚಾಲಿಯಾರ್ ನದಿಯಲ್ಲಿ ಶೋಧ ಕಾರ್ಯ ಮುಂದುವರಿದಿದೆ.

               ಈವರೆಗೂ ಚಾಲಿಯಾರ್‌ ನದಿಯಲ್ಲಿ 75 ಮೃತದೇಹಗಳು ಎಂದು 142 ದೇಹಗಳ ಭಾಗಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries