HEALTH TIPS

ಮಾನವೀಯ ನೆರವು: ಬರಪೀಡಿತ ಮಲಾವಿಗೆ 1,000 ಮೆಟ್ರಿಕ್ ಟನ್ ಅಕ್ಕಿ ರವಾನಿಸಿದ ಭಾರತ

        ವದೆಹಲಿ: ತೀವ್ರ ಬರಪೀಡಿತ ಮಲಾವಿಗೆ ಮಾನವೀಯ ನೆರವಿನ ಭಾಗವಾಗಿ ಭಾರತವು 1,000 ಮೆಟ್ರಿಕ್ ಟನ್ ಅಕ್ಕಿಯನ್ನು ರವಾನಿಸಿದೆ ಎಂದು ವರದಿಯಾಗಿದೆ.

           ಪೂರ್ವ ಆಫ್ರಿಕಾದ ಕೆಲವು ಭಾಗಗಳಲ್ಲಿ ಪ್ರವಾಹ ಮತ್ತು ಮಳೆ ಕೊರತೆ ಎದುರಾಗಿದೆ. ವಿಶೇಷವಾಗಿ ಮಲಾವಿ ತೀವ್ರ ಬರಗಾಲದಿಂದ ತತ್ತರಿಸಿದೆ.


            ಇದರಿಂದಾಗಿ ಆಹಾರ ಉತ್ಪಾದನೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ.

'ಭಾರತವು ಮಾನವೀಯ ನೆರವು ಒದಗಿಸುವ ಮೂಲಕ ಮಲಾವಿಯ ಜನರೊಂದಿಗೆ ಒಗ್ಗಟ್ಟಿನಿಂದ ನಿಲ್ಲುವ ಸಂದೇಶವನ್ನು ರವಾನಿಸಿದೆ. ಎಲ್‌ ನಿನೊ ವಿದ್ಯಮಾನದಿಂದ ಉಂಟಾದ ಭೀಕರ ಬರಗಾಲದ ಪರಿಣಾಮಗಳನ್ನು ಪರಿಹರಿಸಲು 1,000 ಮೆಟ್ರಿಕ್ ಟನ್ ಅಕ್ಕಿ ಸೇರಿದಂತೆ ಇತರೆ ಅಗತ್ಯ ವಸ್ತುಗಳನ್ನು ಇಂದು ಮಲಾವಿಗೆ ತಲುಪಿಸಲಾಗುವುದು' ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ 'ಎಕ್ಸ್‌'ನಲ್ಲಿ ಮಾಹಿತಿ ನೀಡಿದ್ದಾರೆ.

 ‌           ಮಲಾವಿಯ 28 ಜಿಲ್ಲೆಗಳ ಪೈಕಿ 23 ಜಿಲ್ಲೆಗಳು ತೀವ್ರ ಬರಪೀಡಿತ ಎಂದು ಮಾರ್ಚ್‌ನಲ್ಲಿ ಸರ್ಕಾರ ಘೋಷಿಸಿತ್ತು. ಶುಷ್ಕ ಹವಾಮಾನವು ‌ಮಲಾವಿಯಲ್ಲಿ ಆಹಾರ ಪೂರೈಕೆಯನ್ನು ತೀವ್ರವಾಗಿ ಕುಂಠಿತಗೊಳಿಸಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries