HEALTH TIPS

ಕೋಲ್ಕತ್ತ: 2ನೇ ಸುತ್ತಿನ ಮಾತುಕತೆಯೂ ವಿಫಲ; ಮುಂದುವರಿದ ಕಿರಿಯ ವೈದ್ಯರ ಪ್ರತಿಭಟನೆ

 ಕೋಲ್ಕತ್ತ: ಸರ್ಕಾರದೊಂದಿಗಿನ ಎರಡನೇ ಸುತ್ತಿನ ಮಾತುಕತೆಯೂ ವಿಫಲವಾದ ಹಿನ್ನೆಲೆ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಕಿರಿಯ ವೈದ್ಯರು ಘೋಷಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರ ಸುರಕ್ಷತೆಯ ಕುರಿತು ಸರ್ಕಾರ ಲಿಖಿತ ನಿರ್ದೇಶನಗಳನ್ನು ಹೊರಡಿಸುವವರೆಗೂ ಪ್ರತಿಭಟನೆ ಮುಂದುವರಿಸುವುದಾಗಿ ತಿಳಿಸಿದೆ.

'ನಮ್ಮ ಹೆಚ್ಚಿನ ಬೇಡಿಕೆಗಳು ನ್ಯಾಯಯುತವಾಗಿವೆ ಮತ್ತು ತಕ್ಷಣಕ್ಕೆ ಅನುಷ್ಠಾನ ತರುವ ಅಗತ್ಯವಿದೆ ಎಂದು ಸರ್ಕಾರ ಒಪ್ಪಿಕೊಂಡಿದೆ. ಆದರೆ, ಮಾತುಕತೆಯ ಕೊನೆಯಲ್ಲಿ ಸಹಿ ಮಾಡಿದ ಲಿಖಿತ ದಾಖಲೆಗಳನ್ನು ನೀಡಲು ಮುಖ್ಯ ಕಾರ್ಯದರ್ಶಿ ಅವರು ನಿರಾಕರಿಸಿದಾಗ ನಾವು ನಿರಾಶೆಗೊಂಡೆವು' ಎಂದು ಪ್ರತಿಭಟನೆಯ ನಡೆಸುತ್ತಿರುವ ವೈದ್ಯರಲ್ಲಿ ಒಬ್ಬರಾದ ಡಾ. ಅನಿಕೇತ್ ಮಹತೋ ಹೇಳಿದರು.

ಆರ್. ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸಂಬಂಧ ಆರೋಗ್ಯ ಕಾರ್ಯದರ್ಶಿ ಎನ್. ಎಸ್. ನಿಗಮ್ ವಿರುದ್ಧ ತನಿಖೆ ಆರಂಭಿಸಬೇಕೆಂಬ ವೈದ್ಯರ ಬೇಡಿಕೆಯನ್ನು ಒಪ್ಪಿಕೊಳ್ಳಲು ಸರ್ಕಾರ ಹಿಂದೇಟು ಹಾಕಿದೆ.

ಮುಖ್ಯ ಕಾರ್ಯದರ್ಶಿ ಮನೋಜ್ ಪಂತ್ ನೇತೃತ್ವದಲ್ಲಿ ಬುಧವಾರ ಕಿರಿಯ ವೈದ್ಯರ ನಿಯೋಗ ಎರಡನೇ ಸುತ್ತಿನ ಮಾತುಕತೆ ನಡೆಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries